ಜೆಜೆಪಿ ಬೆಂಬಲ: ಹರ್ಯಾಣದಲ್ಲಿ ಸರ್ಕಾರ ರಚನೆಗೆ ಬಿಜೆಪಿಗೆ ಹಕ್ಕು ಮಂಡನೆ; 27 ಕ್ಕೆ ಖಟ್ಟರ್ ಸಿಎಂ ಪದಗ್ರಹಣ 
ದೇಶ

ಜೆಜೆಪಿ ಬೆಂಬಲ: ಹರ್ಯಾಣದಲ್ಲಿ ಸರ್ಕಾರ ರಚನೆಗೆ ಬಿಜೆಪಿಗೆ ಹಕ್ಕು ಮಂಡನೆ; 27 ಕ್ಕೆ ಖಟ್ಟರ್ ಸಿಎಂ ಪದಗ್ರಹಣ  

ಮನೋಹರ್ ಲಾಲ್ ಖಟ್ಟರ್ ಅವರು ಅವಿರೋಧವಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಶನಿವಾರ ಆಯ್ಕೆಯಾಗಿದ್ದು, ದುಷ್ಯಂತ್ ಚೌಟಾಲಾ ನೇತೃತ್ವದ ಜೆಜೆಪಿ ಬೆಂಬಲದ ಮೂಲಕ ಸರ್ಕಾರ ರಚನೆ ಹಕ್ಕನ್ನು ಬಿಜೆಪಿ ಮಂಡಿಸಿದೆ. 

ಚಂಡೀಗಢ: ಮನೋಹರ್ ಲಾಲ್ ಖಟ್ಟರ್ ಅವರು ಅವಿರೋಧವಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಶನಿವಾರ ಆಯ್ಕೆಯಾಗಿದ್ದು, ದುಷ್ಯಂತ್ ಚೌಟಾಲಾ ನೇತೃತ್ವದ ಜೆಜೆಪಿ ಬೆಂಬಲದ ಮೂಲಕ ಸರ್ಕಾರ ರಚನೆ ಹಕ್ಕನ್ನು ಬಿಜೆಪಿ ಮಂಡಿಸಿದೆ. 

ಪಕ್ಷದ ಮೂಲಗಳ ಮಾಹಿತಿಯನ್ನು ಪಡೆದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರಕಟಿಸಿರುವ ವರದಿಯ ಪ್ರಕಾರ ಬಿಜೆಪಿ ನಾಯಕ, ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಮನೋಹರ್ ಲಾಲ್ ಖಟ್ಟರ್, ರಾಜ್ಯಾಧ್ಯಕ್ಷ ಸುಭಾಶ್ ಬರಾಲ ಅವರು ಹರ್ಯಾಣ ಗೌರ್ನರ್ ಸತ್ಯದೇವ್ ನಾರಾಯಣ್ ಆರ್ಯ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. 

ಅ.27 ರಂದು ಮಧ್ಯಾಹ್ನ 2.15 ಕ್ಕೆ  ಮನೋಹರ್ ಲಾಲ್ ಖಟ್ಟರ್ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇನ್ನು ಜೆಜೆಪಿ ನಾಯಕ ಚೌಟಾಲ ರಾಜ್ಯಪಾಲರನ್ನು ಭೇಟಿ ಮಾಡಿದ್ದು ಖಟ್ಟರ್ ನೇತೃತ್ವದ ಸರ್ಕಾರ ಬೆಂಬಲ ನೀಡುತ್ತಿರುವುದರ ಬಗ್ಗೆ ಪತ್ರ ನೀಡಿದ್ದಾರೆ. 

ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹಾಗೂ ಅರುಣ್ ಸಿಂಗ್ ಹರ್ಯಾಣದ ವೀಕ್ಷಕರಾಗಿ ತೆರಳಿದ್ದರು. ಇನ್ನು ಕೆಲವು ಪಕ್ಷೇತರರೂ ಸಹ ಖಟ್ಟರ್ ಸರ್ಕಾರಕ್ಕೆ ಬೇಷರತ್ ಬೆಂಬಲ ನೀಡಿದ್ದು, ಅವರೂ ರಾಜ್ಯಪಾಲರ ಭೇಟಿ ವೇಳೆ ಬಿಜೆಪಿ ನಾಯಕರ ಜೊತೆಗಿದ್ದರು. 

ಖಟ್ಟರ್ ಅವರು ಹರಿಯಾಣ ರಾಜ್ಯದ ಶಾಸಕಾಂಗ ಪಕ್ಷದ ನಾಯಕರು ಎಂದು ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಅವರು ಘೋಷಣೆ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT