ಸಂಗ್ರಹ ಚಿತ್ರ 
ದೇಶ

ರಾಮ ಮಂದಿರ ನಂತರ, ಕಾಶಿ ವಿಶ್ವನಾಥ, ಮಥುರಾ ಕೃಷ್ಣ ದೇಗುಲಗಳು ನಮ್ಮ ಗುರಿ; ಡಾ. ಸುಬ್ರಮಣಿಯನ್ ಸ್ವಾಮಿ

ಅಯೋಧ್ಯೆಯ ರಾಮ ಜನ್ಮ ಭೂಮಿ ವಿವಾದ ಪ್ರಕರಣದಲ್ಲಿ ರಾಮಮಂದಿರ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು ಬರಲಿದೆ ಎಂಬ ಆಶಯವನ್ನು ಬಿಜೆಪಿ ರಾಜ್ಯಸಭಾ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಅಯೋಧ್ಯೆಯ ರಾಮ ಜನ್ಮ ಭೂಮಿ ವಿವಾದ ಪ್ರಕರಣದಲ್ಲಿ ರಾಮಮಂದಿರ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು ಬರಲಿದೆ ಎಂಬ ಆಶಯವನ್ನು ಬಿಜೆಪಿ ರಾಜ್ಯಸಭಾ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿ ವಾಹಿನಿಯೊಂದಕ್ಕೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಅವರು, ಆಯೋಧ್ಯೆಯಲ್ಲಿ ಮಂದಿರ ನಿರ್ಮಾಣವನ್ನು ಕ್ಷಿಪ್ರವಾಗಿ ಆರಂಭಿಸಿ, ಎರಡು ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ. ಇದಕ್ಕೆ ಸಂಬಂಧಿಸಿದ ಅಗತ್ಯ ಏರ್ಪಾಡು ಈಗಾಗಲೇ ನಡೆಸಲಾಗಿದೆ ಎಂದು ಹೇಳಿದರು.

ಮಂದಿರದ ಪರವಾಗಿ ನ್ಯಾಯಾಲಯದ ತೀರ್ಪು ಬಂದರೆ, ನಮ್ಮ ಮುಂದಿನ ಗುರಿ ಕಾಶಿ ವಿಶ್ವನಾಥ ದೇವಾಲಯ ಮತ್ತು ಮಥುರಾ ಶ್ರೀ ಕೃಷ್ಣ ದೇಗುಲವಾಗಿರಲಿವೆ ಎಂದು ತಿಳಿಸಿದರು. ಆಯೋಧ್ಯೆ ರಾಮಜನ್ಮ ಭೂಮಿ ವಿವಾದದಲ್ಲಿ ಕೋರ್ಟ್ ತೀರ್ಪು ಅನುಕೂಲಕರವಾಗಿ ಬರದಿದ್ದರೆ, ಸಂವಿಧಾನ 300 ಎ ವಿಧಿ ಪ್ರಕಾರ ವಿವಾದಿತ ಭೂಮಿಯನ್ನು ರಾಷ್ಟ್ರೀಕರಣಗೊಳಿಸಬಹುದು ಎಂದು ಹೇಳಿದರು.

ಮೊಗಲರ ಆಡಳಿತದಲ್ಲಿ 40 ಸಾವಿರ ದೇಗುಲಗಳನ್ನು ದ್ವಂಸಗೊಳಿಸಲಾಗಿದೆ. ಕಾಶಿ ವಿಶ್ವನಾಥನ ದೇವಾಲಯಕ್ಕಾಗಿ ನಡೆಯುವ ಹೋರಾಟ ಅತ್ಯಂತ ಸುಲಭವಾಗಿರಲಿದೆ ಎಂದು ಡಾ. ಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT