ಮನೋಹರ್ ಲಾಲ್ ಖಟ್ಟರ್ 
ದೇಶ

ಹರ್ಯಾಣ: ಮುಖ್ಯಮಂತ್ರಿ ಆಗಿ 2 ನೇ ಅವಧಿಗೆ ಮನೋಹರ ಲಾಲ್ ಖಟ್ಟರ್ ಪ್ರಮಾಣ ವಚನ ಸ್ವೀಕಾರ

ಹರ್ಯಾಣದ ಮುಖ್ಯಮಂತ್ರಿ ಆಗಿ 2ನೇ ಅವಧಿಗೆ ಮನೋಹರ ಲಾಲ್ ಖಟ್ಟರ್ ಹಾಗೂ ಉಪಮುಖ್ಯಮಂತ್ರಿಯಾಗಿ ಜನ ನಾಯಕ್ ಜನತಾ ಪಕ್ಷದ ದುಷ್ಯಂತ್ ಚೌಟಾಲ ಇಂದು  ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಚಂಢೀಗಡ: ಹರ್ಯಾಣದ ಮುಖ್ಯಮಂತ್ರಿ ಆಗಿ 2ನೇ ಅವಧಿಗೆ ಮನೋಹರ ಲಾಲ್ ಖಟ್ಟರ್ ಹಾಗೂ ಉಪಮುಖ್ಯಮಂತ್ರಿಯಾಗಿ ಜನ ನಾಯಕ್ ಜನತಾ ಪಕ್ಷದ ದುಷ್ಯಂತ್ ಚೌಟಾಲ   ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದಾರೆ

ರಾಜಭವನದಲ್ಲಿ  ಇಂದು ನಡೆದ ಸರಳ  ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮನೋಹರ ಲಾಲ್ ಖಟ್ಟರ್ ಹಾಗೂ ದುಷ್ಯಂತ್ ಚೌಟಾಲ ಅವರಿಗೆ ಹರ್ಯಾಣ ಗವರ್ನರ್ ಸತ್ಯದೇವ್ ನಾರಾಯಣ ಆರ್ಯ ಪ್ರಮಾಣ ವಚನ ಬೋಧಿಸಿದರು. 

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ. ಪಿ. ನಡ್ಡಾ, ಶಿರೋಮಣಿ ಅಕಾಲಿ ದಳ ಮುಖಂಡ ಪ್ರಕಾಶ್ ಸಿಂಗ್ ಬಾದಲ್ ಮತ್ತಿತರರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಈ ಮೂಲಕ ಹರ್ಯಾಣದಲ್ಲಿ ಬಿಜೆಪಿ ಹಾಗೂ ಜೆಜೆಪಿ ನೇತೃತ್ವದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಯಿತು.

90 ಸದಸ್ಯ ಬಲದ ಹರ್ಯಾಣ ವಿಧಾನಸಭೆಗೆ ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಸ್ವತಂತ್ರವಾಗಿ ಸರ್ಕಾರ ರಚನೆಗೆ ಆರು ಸ್ಥಾನಗಳ ಕೊರತೆ ಇತ್ತು. ಇದರಿಂದಾಗಿ ಆರು ಪಕ್ಷೇತರರು ಸೇರಿದಂತೆ ಜೆಜೆಪಿಯೊಂದಿಗೆ ಸೇರಿ ಸರ್ಕಾರ ರಚನೆ ಮಾಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT