ಮನ್ ಕಿ ಬಾತ್' ನಲ್ಲಿ ಸಂಚಿ ಹೊನ್ನಮ್ಮನ 'ಹದಿಬದೆಯ ಧರ್ಮ'ವನ್ನು ಸ್ಮರಿಸಿದ ನಮೋ 
ದೇಶ

ದೀಪಾವಳಿಯ 'ಮನ್ ಕಿ ಬಾತ್' ನಲ್ಲಿ ಸಂಚಿ ಹೊನ್ನಮ್ಮನ 'ಹದಿಬದೆಯ ಧರ್ಮ'ವನ್ನು ಸ್ಮರಿಸಿದ ನಮೋ

ದೀಪಾವಳಿ ಹಬ್ಬದ ದಿನ ಪ್ರಧಾನಿ ನರೇಂದ್ರ ಮೋದಿ ನಡೆಸಿಕೊಟ್ಟ "ಮನ್ ಕಿ ಬಾತ್" ಕಾರ್ಯಕ್ರಮದಲ್ಲಿ ಕನ್ನಡದ ಪ್ರಮುಖ ಮಹಿಳಾ ಕವಯಿತ್ರಿ ಸಂಚಿ ಹೊನ್ನಮ್ಮಳನ್ನು ಸ್ಮರಿಸಿದ್ದಾರೆ. 

ನವದೆಹಲಿ: ದೀಪಾವಳಿ ಹಬ್ಬದ ದಿನ ಪ್ರಧಾನಿ ನರೇಂದ್ರ ಮೋದಿ ನಡೆಸಿಕೊಟ್ಟ "ಮನ್ ಕಿ ಬಾತ್" ಕಾರ್ಯಕ್ರಮದಲ್ಲಿ ಕನ್ನಡದ ಪ್ರಮುಖ ಮಹಿಳಾ ಕವಯಿತ್ರಿ ಸಂಚಿ ಹೊನ್ನಮ್ಮಳನ್ನು ಸ್ಮರಿಸಿದ್ದಾರೆ.

ಸಂಚಿ ಹೊನ್ನಮ್ಮಳ "ಹದಿಬದೆಯ ಧರ್ಮ" ಕಾವ್ಯದ ಪದ್ಯವನ್ನು ಹೇಳುವ ಮೂಲಕ  ಕನ್ನಡ ಕಾವ್ಯ ಹಾಗೂ ಕವಯಿತ್ರಿಯನ್ನು ಕೊಂಡಾಡಿದ್ದಾರೆ. ಐವತ್ತಾರನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ನಡುಗನ್ನಡ ಪದ್ಯದ ಸಾಲುಗಳನ್ನು ಉಲ್ಲೇಖಿಸಿದ್ದಾರೆ.

ಮಹಿಳಾ ಸಬಲೀಕರಣದ ಕುರಿತು ಮಾತನಾಡುತ್ತಾ ಮೋದಿ "ಹದಿಬದೆಯ ಧರ್ಮ" ಕಾವ್ಯದ ಸಾಲುಗಳನ್ನು ಹೇಳಿದ್ದಾರೆ. ಸಂಚಿ ಹೊನ್ನಮ್ಮಳ ಕಾವ್ಯವು . ಹೆಣ್ಣಿನ ಅಸಮಾನತೆಯನ್ನು ಬಲವಾಗಿ ಖಂಡಿಸಿದ ಗ್ರಂಥವಾಗಿದೆ.

ಹದಿನೇಳನೇ ಶತಮಾನದಲ್ಲಿ ಮೈಸೂರು ಒಡೆಯರ್ ಆಸ್ಥಾನದಲ್ಲಿ ಸಂಚಿಯಾಗಿದ್ದ ಹೊನ್ನಮ್ಮ ತನ್ನ ಕಾವ್ಯದ ಮೂಲಕವೇ ಅಂದಿನ ಮಹಿಳೆಯರ ಸ್ಥಿತಿಗತಿಗಳ ಕುರಿತು ಬೆಳಕು ಚೆಲ್ಲಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT