ಪಕ್ಷೇತರರನ್ನು ಸೆಳೆಯಲು ಬಿಜೆಪಿ-ಶಿವಸೇನೆ ಮೈತ್ರಿಕೂಟದ ನಡುವೆ 'ಮಹಾ' ಸರ್ಕಸ್ ! 
ದೇಶ

ಪಕ್ಷೇತರರನ್ನು ಸೆಳೆಯಲು ಬಿಜೆಪಿ-ಶಿವಸೇನೆ ಮೈತ್ರಿಕೂಟದ ನಡುವೆ 'ಮಹಾ' ಸರ್ಕಸ್ ! 

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ನಡುವಿನ ಅಧಿಕಾರ ಹಂಚಿಕೆಯ ಗೊಂದಲ ಮುಂದುವರೆದಿದ್ದು, ಈಗ ಪಕ್ಷೇತರರನ್ನು ತಮ್ಮತ್ತ ಸೆಳೆಯುವಲ್ಲಿ ಬಿಜೆಪಿ-ಶಿವಸೇನೆ ನಾಯಕರ ನಡುವೆ ಪೈಪೋಟಿ ಏರ್ಪಟ್ಟಿದೆ. 

ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ನಡುವಿನ ಅಧಿಕಾರ ಹಂಚಿಕೆಯ ಗೊಂದಲ ಮುಂದುವರೆದಿದ್ದು, ಈಗ ಪಕ್ಷೇತರರನ್ನು ತಮ್ಮತ್ತ ಸೆಳೆಯುವಲ್ಲಿ ಬಿಜೆಪಿ-ಶಿವಸೇನೆ ನಾಯಕರ ನಡುವೆ ಪೈಪೋಟಿ ಏರ್ಪಟ್ಟಿದೆ. 

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟಕ್ಕೆ ಪಕ್ಷೇತರರು, ಮಹಾರಾಷ್ಟ್ರದ ಸಣ್ಣ ಪುಟ್ಟ ರಾಜಕೀಯ ಪಕ್ಷಗಳ ಶಾಸಕರು ಬೆಂಬಲ ನೀಡಿದ್ದಾರೆ. ಪಕ್ಷೇತರ ಶಾಸಕರಾಗಿ ಆಯ್ಕೆಗೊಂಡಿರುವ ಗೀತಾ ಜೈನ್, ರಾಜೇಂದ್ರ ರಾವುತ್, ರವಿ ರಾಣ ಎಂಬ ಮೂವರು ಈಗಾಗಲೇ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಈ ಪೈಕಿ ಗೀತಾ ಜೈನ್ ಎಂಬುವವರು ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಮಿರಾ ಭಾಯಂದರ್ ಕ್ಷೇತ್ರದಿಂದ ಬಿಜೆಪಿಯ ಅಧಿಕೃತ ಅಭ್ಯರ್ಥಿಯನ್ನು ಪರಾಜಯಗೊಳಿಸಿದ್ದರು. ಗೆದ್ದ ಬೆನ್ನಲ್ಲೇ ಸಿಎಂ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿ ಬೆಂಬಲ ಘೋಷಿಸಿದ್ದರು. 

ಇನ್ನು ಶಾಸಕರಾಗಿ ಆಯ್ಕೆಯಾಗಿರುವ ಪ್ರಹಾರ್ ಜನಶಕ್ತಿ ಪಕ್ಷದ ನಾಯಕ, ಬಚ್ಚು ಕಡು ಹಾಗೂ ಅವರ ಸಹವರ್ತಿ ರಾಜ್ ಕುಮಾರ್ ಪಟೇಲ್ ಶಿವಸೇನೆಗೆ ಬೆಂಬಲ ಘೋಷಿಸಿದ್ದಾರೆ. ಇಬ್ಬರೂ ಸಹ ವಿದರ್ಭ ಪ್ರದೇಶದಲ್ಲಿರುವ ಅಮರಾವತಿ ಜಿಲ್ಲೆಯ ಅಚಲ್ ಪುರ ಹಾಗೂ ಮೇಲ್ಘಾಟ್ ನ ವಿಧಾನಸಭಾ ಕ್ಷೇತ್ರಗಳಿಂದ ಆಯ್ಕೆಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT