ಚಿದಂಬರಂ 
ದೇಶ

ಚಿದಂಬರಂಗೆ ಅನಾರೋಗ್ಯ, ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲು

ಐಎನ್‌ಎಕ್ಸ್ ಮೀಡಿಯಾ ಹಗರಣ ಸಂಬಂಧ ಬಂಧನಕ್ಕೊಳಗಾಗಿರುವ ಮಾಜಿ ಹಣಕಾಸು ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರಿಗೆ ಸೋಮವಾರ ಹಠಾತ್ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಹಗರಣ ಸಂಬಂಧ ಬಂಧನಕ್ಕೊಳಗಾಗಿರುವ ಮಾಜಿ ಹಣಕಾಸು ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರಿಗೆ ಸೋಮವಾರ ಹಠಾತ್ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂಲಗಳ ಪ್ರಕಾರ, ಚಿದಂಬರಂ ಅವರನ್ನು ಇಂದು ಬೆಳಗ್ಗೆ ತಿಹಾರ್ ಜೈಲಿನಿಂದ ಆರ್ ಎಂಎಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಇಂದ ಸಂಜೆ 5.40ಕ್ಕೆ ಏಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಚಿದಂಬರಂ ಆಪ್ತ ಮೂಲಗಳ ಪ್ರಕಾರ, ಕಾಂಗ್ರೆಸ್ ನಾಯಕನ ಆರೋಗ್ಯದಲ್ಲಿ ದಿಢೀರ್​​ ಏರುಪೇರಾಗಿದ್ದು, ಅವರ ಆರೋಗ್ಯ ಸಹಜ ಸ್ಥಿತಿಯಲ್ಲಿಲ್ಲ. ಆದರೆ ಚಿದಂಬರಂಗೆ ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದು ಇಡಿ ಮೂಲಗಳು ತಿಳಿಸಿವೆ.

ಕಳೆದ ಆಗಸ್ಟ್ ತಿಂಗಳಲ್ಲಿ ಸಿಬಿಐ ಅಧಿಕಾರಿಗಳು ಐಎನ್ ಎಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಅವರನ್ನು ಬಂಧಿಸಿದ್ದರು. ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು. ನಂತರ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ಇಡಿ) ಅವರನ್ನು ವಶಕ್ಕೆ ಪಡೆದಿದ್ದು, ಮುಂದಿನ ಬುಧವಾರದವರೆಗೆ ಇಡಿ ವಶದಲ್ಲಿರಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT