ಅಶೋಕ್ ಗೆಹ್ಲೋಟ್ 
ದೇಶ

ಇಡೀ ದೇಶವೇ ಲಿಂಚಿಂಗ್ ಬಗ್ಗೆ ಆತಂಕಗೊಂಡಿದೆ: ರಾಜಸ್ತಾನ ಸಿಎಂ ಅಶೋಕ್ ಗೆಹ್ಲೋಟ್

ಸಾಮೂಹಿಕ ಹತ್ಯೆಗಳಂತ ಘಟನೆಯಿಂದಾಗಿ ದೇಶದ ಜನತೆ ಆತಂಕಗೊಂಡಿದ್ದಾರೆ ಎಂದು ರಾಜಸ್ತಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ, ಜಾನುವಾರು ಕಳ್ಳತನದ ಶಂಕೆ ಮತ್ತು ಅಂತಹ ಘಟನೆಗಳು ಸಂಭವಿಸಬಾರದು ಮತ್ತೆ ಸಂಭವಿಸಬಾರದು ಎಂದು ತಿಳಿಸಿದ್ದಾರೆ.

ಜೈಪುರ: ಸಾಮೂಹಿಕ ಹತ್ಯೆಗಳಂತ ಘಟನೆಯಿಂದಾಗಿ ದೇಶದ ಜನತೆ ಆತಂಕಗೊಂಡಿದ್ದಾರೆ ಎಂದು ರಾಜಸ್ತಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ, ಜಾನುವಾರು ಕಳ್ಳತನದ ಶಂಕೆ ಮತ್ತು ಅಂತಹ ಘಟನೆಗಳು ಸಂಭವಿಸಬಾರದು ಮತ್ತೆ ಸಂಭವಿಸಬಾರದು ಎಂದು ತಿಳಿಸಿದ್ದಾರೆ.

ಹಿಂಗೋನಿಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಲಿಂಚಿಂಗ್ ಬಗ್ಗೆ ಪ್ರತಿಕ್ರಿಯಿಸಿದರು, ಹಸು ಎಂದರೇ ತಾಯಿ, ಪ್ರತಿಯೊಬ್ಬ ಹಿಂದೂವಿಗೂ ಹಸುವನ್ನು ತಾಯಿಯೆಂದೇ ಪರಿಗಣಿಸುತ್ತಾರೆ, ಧರ್ಮವೊಂದರ ಧಾರ್ಮಿಕ ಭಾವನೆಗಳನ್ನು ಗೌರವಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.

ದೇಶದಲ್ಲಿ ಭಯ, ಅಪನಂಬಿಕೆ ಮತ್ತು ಹಿಂಸಾಚಾರದ ವಾತಾವರಣ ರೂಪುಗೊಳ್ಳುತ್ತಿದೆ,  ಇಡೀ ದೇಶಕ್ಕೆ ದೇಶವೇ  ಇದರ ಬಗ್ಗೆ ಆತಂಕ ಗೊಂಡಿದೆ, ಇಂಥಹ ಘಟನೆಗಳು ಮರುಕಳಿಸಬಾರದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು ಎಂದು ತಿಳಿಸಿದ್ದಾರೆ.

ಇಂತಹ ಚಟುವಟಿಕೆಗಳಲ್ಲಿ ತೊಡಗಿರುವವರು  ಸಮಾಜ ವಿರೋಧಿಗಳು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಾರೆ, "ಬಿಜೆಪಿ, ಆರ್‌ಎಸ್‌ಎಸ್ ಮತ್ತು ವಿಎಚ್‌ಪಿ ಮುಖಂಡರಿಂದ ಸ್ಪಷ್ಟ ಸಂದೇಶ ರವಾನೆಯಾದರೇ ಇಂಥಹ ಘಟನೆಗಳು ನಡೆಯುವುದಿಲ್ಲ ಎಂದು ಅಬಿಪ್ರಾಯ ಪಟ್ಟಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT