ರಾಜ್ಯಪಾಲರೊಂದಿಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ 
ದೇಶ

ಮಹಾ ಕಗ್ಗಂಟು: ಫಡ್ನವೀಸ್, ಶಿವಸೇನಾ ಮುಖಂಡರಿಂದ ಪ್ರತ್ಯೇಕವಾಗಿ ರಾಜ್ಯಪಾಲರ ಭೇಟಿ!

ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಂದು ಒಂದು ವಾರ ಕಳೆಯುತ್ತಿದ್ದರೂ ಬಿಜೆಪಿ ಹಾಗೂ ಶಿವಸೇನಾ ನಡುವಣ ಹಗ್ಗಜಗ್ಗಾಟದಿಂದಾಗಿ  ಸರ್ಕಾರ ರಚನೆ ಮಹಾ ಕಗ್ಗಂಟಾಗಿ ಪರಿಣಮಿಸಿದೆ. 

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಂದು ಒಂದು ವಾರ ಕಳೆಯುತ್ತಿದ್ದರೂ ಬಿಜೆಪಿ ಹಾಗೂ ಶಿವಸೇನಾ ನಡುವಣ ಹಗ್ಗಜಗ್ಗಾಟದಿಂದಾಗಿ  ಸರ್ಕಾರ ರಚನೆ ಮಹಾ ಕಗ್ಗಂಟಾಗಿ ಪರಿಣಮಿಸಿದೆ. 

ಈ ಮಧ್ಯೆ   ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಶಿವಸೇನಾ ಮುಖಂಡರು ಪ್ರತ್ಯೇಕವಾಗಿ ರಾಜ್ಯಪಾಲರನ್ನು ಭೇಟಿ ಮಾಡಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ರಾಜಭವನದಲ್ಲಿಂದು ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಇಂದು ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ. ಇದಕ್ಕೂ ಮುನ್ನ ಶಿವಸೇನಾ ಮುಖಂಡ ದಿವಾಕರ್  ರಾಟೆ ರಾಜ್ಯಪಾಲರನ್ನು ಭೇಟಿ ಮಾಡಿದ್ದರು.  

ಇದೊಂದು ಸೌಜನ್ಯಯುಕ್ತ ಭೇಟಿಯಾಗಿದೆ, ದೀಪಾವಳಿ ಹಬ್ಬದ ಪ್ರಯುಕ್ತ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ದಿವಾಕರ್ ರಾಟೆ ರಾಜ್ಯಪಾಲರನ್ನು ಭೇಟಿ ಮಾಡಿರುವುದಾಗಿ ರಾಜಭವನ ಸ್ಪಷ್ಟಪಡಿಸಿದೆ. 

ರಾಜ್ಯಪಾಲರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದಿವಾಕರ್ ರಾಟೆ, ರಾಜಕೀಯಕ್ಕೆ ಸಂಬಂಧಿಸಿದಂತೆ ಯಾವುದೇ ಮಾತುಕತೆ ನಡೆಯಲಿಲ್ಲ ಎಂದು ತಿಳಿಸಿದರು.  

ಸರ್ಕಾರ ರಚನೆ ಸಂಬಂಧ ದೀಪಾವಳಿ ಸಂದರ್ಭದಲ್ಲಿ ದಿವಾಕರ್ ರಾಟೆ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ ಎಂಬ ವದಂತಿಗಳ ಬೆನ್ನಲ್ಲೇ  ಪ್ರತಿಕ್ರಿಯಿಸಿದ  ದಿವಾಕರ್ ರಾಟೆ, ಹಲವು ದಿನಗಳ ಬಳಿಕ ರಾಜಭವನಕ್ಕೆ ಭೇಟಿ ನೀಡಿದ್ದು, ರಾಜ್ಯಪಾಲರನ್ನು ಭೇಟಿ ಮಾಡಿದ್ದೇನೆ. ದೀಪಾವಳಿ ಪ್ರಯುಕ್ತ ಶುಭ ಕೋರಿದ್ದೇನೆ. ರಾಜಕೀಯಕ್ಕೆ ಸಂಬಂಧಿಸಿದಂತೆ ಯಾವುದೇ ಮಾತುಕತೆ ನಡೆದಿಲ್ಲ ಎಂದರು. 

ಸರ್ಕಾರ ರಚನೆ ಸಂಬಂಧ ಬಿಜೆಪಿ ಹಾಗೂ ಶಿವಸೇನಾ ನಡುವಣ ಬಿಕ್ಕಟ್ಟು ಮುಂದುವರೆದಿರುವ ಬೆನ್ನಲ್ಲೇ ಈ ರಾಜಕೀಯ ಬೆಳವಣಿಗೆ ನಡೆದಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 105 ಹಾಗೂ ಶಿವಸೇನಾ 56 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ. ಆದರೆ, ಶಿವಸೇನಾ ಸಮಾನ ಅಧಿಕಾರ ಬೇಡಿಕೆ ಮುಂದಿಟ್ಟಿರುವುದರಿಂದ ಸರ್ಕಾರ ರಚನೆ ವಿಳಂಬವಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT