ದೇವೇಂದ್ರ ಫಡ್ನವೀಸ್ ಮತ್ತು ಉದ್ಧವ್ ಠಾಕ್ರೆ 
ದೇಶ

ಶಿವಸೇನೆಯ 45 ಶಾಸಕರು ಫಡ್ನವಿಸ್ ಸಿಎಂ ಆಗಬೇಕು ಎನ್ನುತ್ತಿದ್ದಾರೆ: ಬಿಜೆಪಿ ಸಂಸದ

ಶಿವಸೇನೆಯ ಸುಮಾರು 45 ಶಾಸಕರು ಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಬೇಕು ಮತ್ತು ಮತ್ತೆ ದೇವೇಂದ್ರ ಫಡ್ನವಿಸ್ ಅವರೇ ಮುಖ್ಯಮಂತ್ರಿಯಾಗಬೇಕು ಎಂದು ಬಯಸುತ್ತಿರುವುದಾಗಿ...

ಮುಂಬೈ: ಶಿವಸೇನೆಯ ಸುಮಾರು 45 ಶಾಸಕರು ಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಬೇಕು ಮತ್ತು ಮತ್ತೆ ದೇವೇಂದ್ರ ಫಡ್ನವಿಸ್ ಅವರೇ ಮುಖ್ಯಮಂತ್ರಿಯಾಗಬೇಕು ಎಂದು ಬಯಸುತ್ತಿರುವುದಾಗಿ ಮಂಗಳವಾರ ಬಿಜೆಪಿ ರಾಜ್ಯಸಭಾ ಸದಸ್ಯ ಸಂಜಯ್ ಕಾಕಡೆ ಅವರು ಹೇಳಿದ್ದಾರೆ.

ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಆಡಳಿತರೂಢ ಬಿಜೆಪಿ - ಶಿವಸೇನೆ ನಡುವೆ ಹಗ್ಗ ಜಗ್ಗಾಟ ನಡೆದಿದ್ದು, ಶಿವಸೇನೆ ಪ್ರತಿಪಕ್ಷದಲ್ಲಿ ಕುಳಿತುಕೊಳ್ಳಲು ಬಯಸುವುದಿಲ್ಲ ಎಂದು ಕಾಕಡೆ ಹೇಳಿದ್ದಾರೆ.

56 ಶಿವಸೇನಾ ಶಾಸಕರ ಪೈಕಿ 45 ಶಾಸಕರು ಫಡ್ನವಿಸ್ ಅವರು ಮತ್ತೆ ಸಿಎಂ ಆಗಬೇಕು ಎಂದು ಬಯಸುತ್ತಿದ್ದಾರೆ. ನೀವು ಏನಾದರೂ ಮಾಡಿ ನಾವು ಮಾತ್ರ ಬಿಜೆಪಿ ಸರ್ಕಾರದಲ್ಲಿ ಭಾಗಿಯಾಗಬೇಕು ಎಂದು ಸೇನಾ ಶಾಸಕರು ಹೇಳಿರುವುದಾಗಿ ಕಾಕಡೆ ತಿಳಿಸಿದ್ದಾರೆ.

ಇತ್ತೀಚಿಗಷ್ಟೇ ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 105 ಹಾಗೂ ಶಿವಸೇನೆ 56 ಸ್ಥಾನ ಗೆದ್ದಿದ್ದು, ಈಗ ಅಧಿಕಾರ ಹಂಚಿಕೆ ಬಿಕ್ಕಟ್ಟು ಸೃಷ್ಟಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT