ಬಾಲಕ ಸುಜಿತ್ 
ದೇಶ

ತಮಿಳುನಾಡು: ಸತತ ಕಾರ್ಯಾಚರಣೆ ಹೊರತಾಗಿಯೂ ಬೋರ್ ವೆಲ್ ಗೆ ಬಿದ್ದಿದ್ದ ಬಾಲಕ ಸುಜಿತ್ ಸಾವು!

88 ಆಳದ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕನ ರಕ್ಷಣೆಗೆ ಕಳೆದ ಹಲವು ದಿನಗಳಿಂದ ನಡೆದಿದ್ದ ರಕ್ಷಣಾ ಕಾರ್ಯಾಚರಣೆ ವಿಫಲವಾಗಿದ್ದು, ಬಾಲಕ ಸುಜಿತ್ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಚೆನ್ನೈ: 88 ಆಳದ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕನ ರಕ್ಷಣೆಗೆ ಕಳೆದ ಹಲವು ದಿನಗಳಿಂದ ನಡೆದಿದ್ದ ರಕ್ಷಣಾ ಕಾರ್ಯಾಚರಣೆ ವಿಫಲವಾಗಿದ್ದು, ಬಾಲಕ ಸುಜಿತ್ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ತಮಿಳುನಾಡಿನ ತಿರುಚಿನಾಪಳ್ಳಿ ಸಮೀಪ ಶುಕ್ರವಾರ ಕೊಳವೆಬಾವಿಗೆ ಬಿದ್ದಿದ್ದ ಎರಡು ವರ್ಷದ ಸುಜೀತ್ ವಿಲ್ಸನ್ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.

ಸೋಮವಾರ ರಾತ್ರಿ 10.30ಕ್ಕೆ ಕೊಳವೆಬಾವಿಯಿಂದ ಕೆಟ್ಟ ವಾಸನೆ ಬರುತ್ತಿತ್ತು. ವೈದ್ಯರು, ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ಅವಲೋಕಿಸಿದರು. ಅಲ್ಲದೆ ಕಳೆದ 3 ದಿನಗಳಿಂದ ನಿರಂತರ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ ಬಾಲಕ ಸುಜಿತ್ ಸಾವನ್ನಪ್ಪಿದ್ದಾನೆ. ಕೊಳವೆಬಾವಿಯಲ್ಲಿ 88 ಅಡಿ ಆಳದಲ್ಲಿ ಬಾಲಕ ಸಿಲುಕಿದ್ದ. ಕಲ್ಮಣ್ಣು ಮತ್ತು ಮಳೆಯಿಂದಾಗಿ ಬಾಲಕನನ್ನು ರಕ್ಷಿಸುವ ಕಾರ್ಯ ವಿಫಲವಾಯಿತು.

ಪ್ರಸ್ತುತ ಸುಜಿತ್ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಘಟನಾ ಸ್ಥಳದಲ್ಲಿ ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ.

ನಡುಕಟ್ಟುಪಟ್ಟಿ ಸಮೀಪ ಮನೆಯಲ್ಲಿ ಆಡುತ್ತಿದ್ದ ಮಗು ಶುಕ್ರವಾರ ಸಂಜೆ ಕೊಳವೆಬಾವಿಗೆ ಬಿದ್ದಿತ್ತು. ಮಗುವಿನ ರಕ್ಷಣೆಗೆ ಅಗ್ಮಿ ಶಾಮಕದಳ, ಪೊಲೀಸ್ ಇಲಾಖೆ, ವಿಪತ್ತು ನಿರ್ವಹಣಾ ಸಿಬ್ಬಂದಿಗಳು ಸೇರಿದಂತೆ ಹಲವು ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಬಾಲಕ ಸುಜಿತ್ ಸುರಕ್ಷಿತವಾಗಿ ಹೊರಬರಲಿ ಎಂದು ಲಕ್ಷಾಂತರ ಪ್ರಾರ್ಥಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಹ ಮಗುವಿನ ಜೀವ ಉಳಿಯಲಿ ಎಂದು ಪ್ರಾರ್ಥಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!