ಜನರನ್ನು ದಾರಿ  ತಪ್ಪಿಸುತ್ತಿರುವ ಮೋದಿ ಸರ್ಕಾರ: ಅಧೀರ್ ಚೌಧರಿ 
ದೇಶ

ಜನರನ್ನು ದಾರಿ  ತಪ್ಪಿಸುತ್ತಿರುವ ಮೋದಿ ಸರ್ಕಾರ: ಅಧೀರ್ ಚೌಧರಿ

ನರೇಂದ್ರ ಮೋದಿ ನೇತೃತ್ವದ ಸರ್ಕಾರ "ತಪ್ಪು ನೀತಿಗಳಿಂದ  ದೇಶದ  ಜನರನ್ನು ದಾರಿ  ತಪ್ಪಿಸುತ್ತಿದೆ ಎಂದು ಲೋಕಸಭೆಯ ಕಾಂಗ್ರೆಸ್ ಮುಖಂಡ ಅಧೀರ್ ಚೌಧರಿ ಎಂದು ವಾಗ್ದಾಳಿ ನಡೆಸಿದ್ದಾರೆ. 

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸರ್ಕಾರ "ತಪ್ಪು ನೀತಿಗಳಿಂದ  ದೇಶದ  ಜನರನ್ನು ದಾರಿ  ತಪ್ಪಿಸುತ್ತಿದೆ ಎಂದು ಲೋಕಸಭೆಯ ಕಾಂಗ್ರೆಸ್ ಮುಖಂಡ ಅಧೀರ್ ಚೌಧರಿ ಎಂದು ವಾಗ್ದಾಳಿ ನಡೆಸಿದ್ದಾರೆ. 

ಕಾಶ್ಮೀರದ ಪರಿಸ್ಥಿತಿ "ಹದಗೆಡಲು"ಕೇಂದ್ರ ನೀತಿಯೇ ಮುಖ್ಯ ಕಾರಣ, ಕಣಿವೆಯಲ್ಲಿನ "ನೈಜ ಪರಿಸ್ಥಿತಿಯನ್ನು" ಮರೆಮಾಡಲು ಮಾತ್ರ ಉತ್ಸುಕವಾಗಿದೆ ಎಂದೂ ಅವರು ದೂರಿದರು. ಮುರ್ಷಿದಾಬಾದ್ ಜಿಲ್ಲೆಯ ಬೆರ್ಹಾಂಪೋರ್ ಲೋಕಸಭಾ ಸ್ಥಾನದ ಐದು ಬಾರಿ ಸಂಸದರೂ ಆಗಿರುವ ಚೌಧರಿ ಬುಧವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರಿಂದ ಹತ್ಯೆಗೀಡಾದ ಐದು ಕಾರ್ಮಿಕರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಅವರಿಗೆ ಸಾಂತ್ವನ ಹೇಳಿದರು. 

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಚೌಧರಿ, ಕೇಂದ್ರ ಗೃಹ ಕಾರ್ಯದರ್ಶಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು ಕಣಿವೆಯಲ್ಲಿ ಮೃತಪಟ್ಟ ಪಶ್ಚಿಮ ಬಂಗಾಳದ ಇತರ ಕಾರ್ಮಿಕರ ಶವಗಳನ್ನು ರಾಜ್ಯಕ್ಕೆ ತರಲು ವ್ಯವಸ್ಥೆ ಮಾಡಬೇಕೆಂದು ಕೇಂದ್ರವನ್ನು ಅವರು ಒತ್ತಾಯಿಸಿದರು. ದಿನ ಕಳೆದಂತೆ ಕಣಿವೆಯ ಪರಿಸ್ಥಿತಿ ಹದಗೆಡುತ್ತಿದೆ. ಕೇಂದ್ರ ಸರ್ಕಾರದ ತಪ್ಪು ನೀತಿಗಳಿಂದಾಗಿ ಇದು ನಮ್ಮ ಕೈಮೀರುತ್ತಿದೆ ಆದರೆ ಇದು ನೈಜ ಪರಿಸ್ಥಿತಿಯನ್ನು ಮರೆಮಾಡಲು ಪ್ರಯತ್ನಿಸುವುದರಲ್ಲಿ ಮಾತ್ರ ಸರಕಾರ ಬಹಳ ಜಾಣತನ ತೋರುತ್ತಿದೆ ಎಂದೂ ಅವರು ಕಿಡಿ ಕಾರಿದರು. ಪಶ್ಚಿಮ ಬಂಗಾಳದ ಐವರು ವಲಸೆ ಕಾರ್ಮಿಕರನ್ನು ಮಂಗಳವಾರ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ಗುಂಡಿಕ್ಕಿ ಕೊಂದು ಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT