ದೇಶ

ಅ.31ರಂದು ಸರ್ದಾರ್ ಪಟೇಲ್ ರ ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಗೌರವ

Lingaraj Badiger

ನವದೆಹಲಿ: ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಅಕ್ಟೋಬರ್ 31ರಂದು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ನಲ್ಲಿರುವ ಏಕತಾ ಪ್ರತಿಮೆಗೆ ಗೌರವ ಸಲ್ಲಿಸಲಿದ್ದಾರೆ.

ಅಂದು ಪ್ರಧಾನಿ ಮೋದಿ ಅವರು ಏಕತಾ ದಿವಸದ ಪೆರೇಡ್ ನಲ್ಲಿ ಪಾಲ್ಗೊಂಡು, ತಂತ್ರಜ್ಞಾನ ಪ್ರದರ್ಶನ ಪ್ರದೇಶಕ್ಕೆ ಭೇಟಿ ನೀಡಿ ನಂತರ ಕೇವಾಡಿಯದಲ್ಲಿನ ನಾಗರಿಕ ಸೇವೆಯ ತರಬೇತಿ ಅವಧಿಯಲ್ಲಿರುವವರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಬುಧವಾರ ಅಧಿಕೃತ ಪ್ರಕಟಣೆ ತಿಳಿಸಿದೆ.

2014ರಿಂದ ಪ್ರತಿ ವರ್ಷ 'ಉಕ್ಕಿನ ಮನುಷ್ಯ' ಖ್ಯಾತಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನ(ಅಕ್ಟೋಬರ್ 31)ವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲಾಗುತ್ತಿದೆ.

SCROLL FOR NEXT