ಶಿವಸೇನೆ ಶಾಸಕಾಂಗ ಪಕ್ಷದ ನಾಯಕನಾಗಿ ಏಕನಾಥ್ ಶಿಂಧೆ ಆಯ್ಕೆ: ಶಿವಸೇನೆಯಿಂದ ರಾಜ್ಯಪಾಲರ ಭೇಟಿ 
ದೇಶ

ಶಿವಸೇನೆ ಶಾಸಕಾಂಗ ಪಕ್ಷದ ನಾಯಕನಾಗಿ ಏಕನಾಥ್ ಶಿಂಧೆ ಆಯ್ಕೆ: ರಾಜ್ಯಪಾಲರ ಭೇಟಿ;  ಕಾಂಗ್ರೆಸ್-ಎನ್ ಸಿಪಿ ಜೊತೆ ಚರ್ಚೆ!

ಮಹಾರಾಷ್ಟ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. ಶಿವಸೇನೆ ಶಾಸಕಾಂಗ ಪಕ್ಷದ ನಾಯಕನಾಗಿ ಏಕನಾಥ್ ಶಿಂಧೆ ಆಯ್ಕೆಗೊಂಡಿದ್ದಾರೆ. 

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. ಶಿವಸೇನೆ ಶಾಸಕಾಂಗ ಪಕ್ಷದ ನಾಯಕನಾಗಿ ಏಕನಾಥ್ ಶಿಂಧೆ ಆಯ್ಕೆಗೊಂಡಿದ್ದಾರೆ. 

ಶಿವಸೇನೆಯ ಯುವ ಘಟಕದ ಅಧ್ಯಕ್ಷ, ಶಾಸಕ ಆದಿತ್ಯ ಠಾಕ್ರೆ ಬಿಜೆಪಿ-ಶಿವಸೇನೆ ಸರ್ಕಾರದ ಭಾಗವಾಗಿರುತ್ತಾರೆ ಎಂಬ ಬಗ್ಗೆ ಭಾರಿ ಊಹಾಪೋಹ ಉಂಟಾಗಿತ್ತು. ಆದರೆ ಅ.31 ರಂದು ನಡೆದ ಶಿವಸೇನೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಸ್ವತಃ ಆದಿತ್ಯ ಠಾಕ್ರೆ ಹಾಗೂ ಉದ್ಧವ್ ಠಾಕ್ರೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಪ್ರಥಮ ಬಾರಿಗೆ ಶಾಸಕರಾಗಿ ಆಯ್ಕೆಗೊಂದಿರುವ 29 ವರ್ಷದ ಆದಿತ್ಯ ಠಾಕ್ರೆ ಇನ್ನೂ ಶಾಸಕಂಗದ ಕಾರ್ಯನಿರ್ವಹಣೆಯ ಬಗ್ಗೆ ಒಂದೆರಡು ವರ್ಷಗಳ ಕಾಲ ಅರ್ಥ ಮಾಡಿಕೊಳ್ಳಬೇಕು ಆದ್ದರಿಂದ ಸದ್ಯಕ್ಕೆ ಆದಿತ್ಯಠಾಕ್ರೆ ಬಿಜೆಪಿ-ಶಿವಸೇನೆ ಸಮ್ಮಿಶ್ರ ಸರ್ಕಾರದ ಭಾಗವಾಗಿರುವುದಿಲ್ಲ ಎಂಬುದನ್ನು ಶಿವಸೇನೆ ಸ್ಪಷ್ಟಪಡಿಸಿದೆ. 

ಶಿವಸೇನೆಯ ಶಾಸಕಾಂಗ ಪಕ್ಷದ ನಾಯಕರಾಗಲು ಉದ್ಧವ್ ಠಾಕ್ರೆ ಏಕನಾಥ್ ಶಿಂಧೆ ಅಥವಾ ಸುಭಾಶ್ ದೇಸಾಯಿ ಅವರ ಹೆಸರುಗಳನ್ನು ಅಂತಿಮಗೊಳಿಸಿದ್ದರು. ಇಬ್ಬರೂ ಸಹ ಈ ಹಿಂದಿನ ದೇವೇಂದ್ರ ಫಡ್ನವೀಸ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 

ಶಿವಸೇನೆಯಿಂದ ರಾಜ್ಯಪಾಲರ ಭೇಟಿ! 

ಈ ನಡುವೆ ಮಧ್ಯಾಹ್ನ 3:30 ರ ವೇಳೆಗೆ ಶಿವಸೇನೆಯ ಶಾಸಕರು ಆದಿತ್ಯಠಾಕ್ರೆ ನೇತೃತ್ವದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ. ಶಿವಸೇನೆಯ ಈ ನಡೆ ಕುತೂಹಲ ಕೆರಳಿಸಿದೆ. ಈ ನಡುವೆ ಶಿವಸೇನೆ ಉದ್ಧವ್ ಠಾಕ್ರೆ ಹೇಳಿಕೆ ನೀಡಿದ್ದು, ಎನ್ ಸಿಪಿ-ಕಾಂಗ್ರೆಸ್ ಜೊತೆಗೂ ಚರ್ಚೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT