ಲಡಾಕ್ ಕೇಂದ್ರಾಡಳಿತ ಪ್ರದೇಶದ ಮೊದಲ ಗವರ್ನರ್ ಆಗಿ ಗುರುವಾರ ರಾಧಾ ಕೃಷ್ಣ ಮಾಥೂರ್ ಪ್ರಮಾಣವಚನ ಸ್ವೀಕರಿಸಿದರು.  
ದೇಶ

ಜಮ್ಮು-ಕಾಶ್ಮೀರಕ್ಕೆ ಗಿರೀಶ್ ಚಂದ್ರ ಮುರ್ಮು, ಲಡಾಕ್ ಗೆ ಆರ್ ಕೆ ಮಾಥುರ್ ಲೆ.ಗವರ್ನರ್ ಗಳಾಗಿ ಪ್ರತಿಜ್ಞಾವಿಧಿ ಸ್ವೀಕಾರ 

ಲಡಾಕ್ ಕೇಂದ್ರಾಡಳಿತ ಪ್ರದೇಶದ ಮೊದಲ ಗವರ್ನರ್ ಆಗಿ ಗುರುವಾರ ರಾಧಾ ಕೃಷ್ಣ ಮಾಥೂರ್ ಪ್ರಮಾಣವಚನ ಸ್ವೀಕರಿಸಿದರು. 

ನವದೆಹಲಿ/ಶ್ರೀನಗರ: ಲಡಾಕ್ ಕೇಂದ್ರಾಡಳಿತ ಪ್ರದೇಶದ ಮೊದಲ ಗವರ್ನರ್ ಆಗಿ ಗುರುವಾರ ರಾಧಾ ಕೃಷ್ಣ ಮಾಥೂರ್ ಪ್ರಮಾಣವಚನ ಸ್ವೀಕರಿಸಿದರು. 


ಜಮ್ಮು-ಕಾಶ್ಮೀರ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ನ್ಯಾಯಾಧೀಶ ಗೀತಾ ಮಿತ್ತಲ್ ಮಾಥೂರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಲೇಹ್ ನಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ಪ್ರತಿಜ್ಞಾ ವಿಧಿ ಬೋಧನೆ ನಡೆಯಿತು.


ಇನ್ನೊಂದೆಡೆ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಗಳಿಗೆ ನೂತನ ಗವರ್ನರ್ ಆಗಿ ಗಿರೀಶ್ ಚಂದ್ರ ಮುರ್ಮು ಅಧಿಕಾರ ವಹಿಸಿಕೊಂಡರು. ಸರ್ಕಾರದ ಕಚೇರಿ ಶ್ರೀನಗರದಿಂದ ಜಮ್ಮುವಿಗೆ ವರ್ಗಾವಣೆಗೊಂಡರೂ ಸಹ ನೂತನ ಗವರ್ನರ್ ಅವರ ಪ್ರತಿಜ್ಞಾವಿಧಿ ಕಾರ್ಯಕ್ರಮವನ್ನು ಕಾಶ್ಮೀರ ದೇಶದ ಬೇರೆ ಭಾಗಗಳ ಜೊತೆ ಸೇರಿಕೊಂಡು ಸಮಗ್ರ ಭಾರತವಾಗಿದೆ ಎಂದು ಬಿಂಬಿಸಲು ಶ್ರೀನಗರದಲ್ಲಿಯೇ ನಡೆಸಲಾಯಿತು. 


ದಶಕಗಳ ಕಾಲ ಜಮ್ಮು -ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಸಂವಿಧಾನ ವಿಧಿ 370ನ್ನು ರದ್ದುಪಡಿಸಿದ ಸುಮಾರು 3 ತಿಂಗಳ ನಂತರ ಜಮ್ಮು ಮತ್ತು ಕಾಶ್ಮೀರ ಎಂದು ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳನ್ನಾಗಿ ರಚಿಸಲಾಗಿದೆ. 


ಇದುವರೆಗೆ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯಪಾಲರಾಗಿದ್ದ ಸತ್ಯಪಾಲ್ ಮಲಿಕ್ ಅವರನ್ನು ಗೋವಾ ರಾಜ್ಯಪಾಲರಾಗಿ ವರ್ಗಾಯಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

SCROLL FOR NEXT