ವಿಜಯ್ ರೂಪಾನಿ 
ದೇಶ

ಸರ್ದಾರ್ ಪಟೇಲ್ ಗೆ ಗೌರವ ನಮನ ಸಲ್ಲಿಸದ ಸೋನಿಯಾ, ರಾಹುಲ್ ವಿರುದ್ಧ ರೂಪಾನಿ ವಾಗ್ದಾಳಿ

ಸ್ವಾತಂತ್ರ್ಯ ಭಾರತದ ಮೊದಲ ಉಪ ಪ್ರಧಾನಿ ಸರ್ದಾರ್ ವಲ್ಲಭ್ ಬಾಯಿ ಪಟೇಲ್ ಅವರ 114ನೇ ಜನ್ಮ  ವರ್ಷಾಚರಣೆ ಸಂದರ್ಭದಲ್ಲಿ ಅವರಿಗೆ ಗೌರವ ನಮನ ಸಲ್ಲಿಸದ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ವಾಗ್ದಾಳಿ ನಡೆಸಿದ್ದಾರೆ.

ಗಾಂಧಿನಗರ:  ಸ್ವಾತಂತ್ರ್ಯ ಭಾರತದ ಮೊದಲ ಉಪ ಪ್ರಧಾನಿ ಸರ್ದಾರ್ ವಲ್ಲಭ್ ಬಾಯಿ ಪಟೇಲ್ ಅವರ 114ನೇ ಜನ್ಮ  ವರ್ಷಾಚರಣೆ ಸಂದರ್ಭದಲ್ಲಿ ಅವರಿಗೆ ಗೌರವ ನಮನ ಸಲ್ಲಿಸದ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ವಾಗ್ದಾಳಿ ನಡೆಸಿದ್ದಾರೆ.

ಇಡೀ ದೇಶಾದ್ಯಂತ ಸರ್ದಾರ್ ವಲ್ಲಭ್ ಬಾಯಿ ಪಟೇಲ್ ಅವರ ಜನ್ಮ ದಿನಾಚರಣೆಯಲ್ಲಿ ಮುಳುಗಿರುವಾಗ ಸೋನಿಯಾ ಹಾಗೂ ರಾಹುಲ್ ಗಾಂಧಿ, ದೇಶದ ಉಕ್ಕಿನ ಮನುಷ್ಯನಿಗೆ ಕನಿಷ್ಠ ಗೌರವ ನೀಡದಿರುವುದು ದು:ಖಕರವಾಗಿದೆ ಎಂದು ರೂಪಾನಿ ಟ್ವೀಟ್ ಮಾಡಿದ್ದಾರೆ.

ಇದಕ್ಕೂ ಮುನ್ನ ಫೇಸ್ ಬುಕ್ ಪೇಜ್ ಮೂಲಕ ರಾಹುಲ್ ಗಾಂಧಿ, ಸರ್ದಾರ್ ವಲ್ಲಭ್ ಬಾಯಿ ಪಟೇಲ್ ಅವರಿಗೆ ನಮನ ಸಲ್ಲಿಸಿದ್ದರು.

ಭಾರತವನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದೇಶದ ಮೊದಲ ಉಪ ಪ್ರಧಾನಿ ಹಾಗೂ ಗೃಹ ಸಚಿವ ಸರ್ದಾರ್ ವಲ್ಲಭ್ ಬಾಯಿ ಪಟೇಲ್ ಅವರನ್ನು ದೇಶಾದ್ಯಂತ ಸ್ಮರಿಸಲಾಯಿತು. ಅವರ ಜನ್ಮ ದಿನವನ್ನು 2014 ಅಕ್ಟೋಬರ್ 31ರಿಂದ ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?