ವಿಜಯ್ ರೂಪಾನಿ 
ದೇಶ

ಸರ್ದಾರ್ ಪಟೇಲ್ ಗೆ ಗೌರವ ನಮನ ಸಲ್ಲಿಸದ ಸೋನಿಯಾ, ರಾಹುಲ್ ವಿರುದ್ಧ ರೂಪಾನಿ ವಾಗ್ದಾಳಿ

ಸ್ವಾತಂತ್ರ್ಯ ಭಾರತದ ಮೊದಲ ಉಪ ಪ್ರಧಾನಿ ಸರ್ದಾರ್ ವಲ್ಲಭ್ ಬಾಯಿ ಪಟೇಲ್ ಅವರ 114ನೇ ಜನ್ಮ  ವರ್ಷಾಚರಣೆ ಸಂದರ್ಭದಲ್ಲಿ ಅವರಿಗೆ ಗೌರವ ನಮನ ಸಲ್ಲಿಸದ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ವಾಗ್ದಾಳಿ ನಡೆಸಿದ್ದಾರೆ.

ಗಾಂಧಿನಗರ:  ಸ್ವಾತಂತ್ರ್ಯ ಭಾರತದ ಮೊದಲ ಉಪ ಪ್ರಧಾನಿ ಸರ್ದಾರ್ ವಲ್ಲಭ್ ಬಾಯಿ ಪಟೇಲ್ ಅವರ 114ನೇ ಜನ್ಮ  ವರ್ಷಾಚರಣೆ ಸಂದರ್ಭದಲ್ಲಿ ಅವರಿಗೆ ಗೌರವ ನಮನ ಸಲ್ಲಿಸದ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ವಾಗ್ದಾಳಿ ನಡೆಸಿದ್ದಾರೆ.

ಇಡೀ ದೇಶಾದ್ಯಂತ ಸರ್ದಾರ್ ವಲ್ಲಭ್ ಬಾಯಿ ಪಟೇಲ್ ಅವರ ಜನ್ಮ ದಿನಾಚರಣೆಯಲ್ಲಿ ಮುಳುಗಿರುವಾಗ ಸೋನಿಯಾ ಹಾಗೂ ರಾಹುಲ್ ಗಾಂಧಿ, ದೇಶದ ಉಕ್ಕಿನ ಮನುಷ್ಯನಿಗೆ ಕನಿಷ್ಠ ಗೌರವ ನೀಡದಿರುವುದು ದು:ಖಕರವಾಗಿದೆ ಎಂದು ರೂಪಾನಿ ಟ್ವೀಟ್ ಮಾಡಿದ್ದಾರೆ.

ಇದಕ್ಕೂ ಮುನ್ನ ಫೇಸ್ ಬುಕ್ ಪೇಜ್ ಮೂಲಕ ರಾಹುಲ್ ಗಾಂಧಿ, ಸರ್ದಾರ್ ವಲ್ಲಭ್ ಬಾಯಿ ಪಟೇಲ್ ಅವರಿಗೆ ನಮನ ಸಲ್ಲಿಸಿದ್ದರು.

ಭಾರತವನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದೇಶದ ಮೊದಲ ಉಪ ಪ್ರಧಾನಿ ಹಾಗೂ ಗೃಹ ಸಚಿವ ಸರ್ದಾರ್ ವಲ್ಲಭ್ ಬಾಯಿ ಪಟೇಲ್ ಅವರನ್ನು ದೇಶಾದ್ಯಂತ ಸ್ಮರಿಸಲಾಯಿತು. ಅವರ ಜನ್ಮ ದಿನವನ್ನು 2014 ಅಕ್ಟೋಬರ್ 31ರಿಂದ ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT