ಸರಿತಾ ನಾಯರ್ 
ದೇಶ

ಕೇರಳ ಸೋಲಾರ್ ಹಗರಣ: ಸರಿತಾ ನಾಯರ್, ಪತಿ ಬಿಜುಗೆ 3 ವರ್ಷ ಜೈಲು ಶಿಕ್ಷೆ

ಕೇರಳದ ಸೋಲಾರ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸರಿತಾ ನಾಯರ್ ಹಾಗೂ ಆಕೆಯ ಪತಿ ಬಿಜು ರಾಧಾಕೃಷ್ಣನ್ ಗೆ ಕೊಯಮತ್ತೂರು ಕೋರ್ಟ್ ಮೂರು ವರ್ಷಗಳ ಶಿಕ್ಷೆ ವಿಧಿಸಿದೆ.

ಕೊಯಮತ್ತೂರು: ಕೇರಳದ ಸೋಲಾರ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸರಿತಾ ನಾಯರ್ ಹಾಗೂ ಆಕೆಯ ಪತಿ ಬಿಜು ರಾಧಾಕೃಷ್ಣನ್ ಗೆ ಕೊಯಮತ್ತೂರು ಕೋರ್ಟ್ ಮೂರು ವರ್ಷಗಳ ಶಿಕ್ಷೆ ವಿಧಿಸಿದೆ.

ಸರಿತಾ ನಾಯರ್ ಹಾಗೂ ಆಕೆಯ ಪತಿ ಬಿಜು ರಾಧಾಕೃಷ್ಣನ್ ಮತ್ತು ವ್ಯವಸ್ಥಾಪಕ ರವಿಗೆ ತಪ್ಪಿತಸ್ಥ ಎಂದು ಕೋರ್ಟ್ ತೀರ್ಪು ನೀಡಿದ್ದು, ಅಪರಾಧಿಗಳಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ ತಲಾ 10 ಸಾವಿರ ರು ರುಪಾಯಿ ದಂಡ ವಿಧಿಸಿದೆ. 

ಜಿಲ್ಲಾ ಕ್ರೈಂ ಬ್ರಾಂಚ್ ಪ್ರಕಾರ. ಸರಿತಾ ನಾಯರ್ ಹಾಗೂ ಆಕೆಯ ಆಪ್ತರ ವಿರುದ್ಧ ಕೊಯಮತ್ತೂರು ಮತ್ತು ನಿಲಗಿರಿಯಲ್ಲಿ ಎರಡು ಪ್ರತ್ಯೇಕ ವಂಚನೆ ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳಲ್ಲಿ ಪವನ ವಿದ್ಯುತ್ ಉತ್ಪಾದನಾ ಘಟಕದ ಹೆಸರಿನಲ್ಲಿ 33 ಲಕ್ಷ ರೂಪಾಯಿ ವಂಚಿಸಿದ ಆರೋಪ ಎದುರಿಸುತ್ತಿದ್ದರು.

ಸೋಲಾರ್ ಹಗರಣಕ್ಕೆ ಸಂಬಂಧಿಸಿದಂತೆ 8 ತಿಂಗಳು ಜೈಲು ವಾಸ ಅನುಭವಿಸಿದ್ದ ಸರಿತಾ ನಾಯರ್ 2014 ರ ಫೆಬ್ರವರಿಯಲ್ಲಿ ಜಾಮೀನಿನ ಮೇಲೆ ಹೊರ ಬಂದಿದ್ದರು. ಕಣ್ಣೂರಿನಲ್ಲಿ ಸೋಲಾರ್ ಫಲಕ ಅಳವಡಿಕೆ ಘಟಕ ಸ್ಥಾಪಿಸಲು ತನ್ನನ್ನು ಕರೆದು ಕಾಂಗ್ರೆಸ್ ಶಾಸಕ ಎ.ಪಿ ಅದುಲ್ ಕುಟ್ಟಿ ತಿರುವನಂತಪುರದ ಸರ್ಕಾರಿ ಹೋಟೆಲ್ ನಲ್ಲಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು 2014 ರಲ್ಲಿ ಸರಿತಾ ನಾಯರ್ ದೂರು ದಾಖಲಿಸಿದ್ದರು. 

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ವಿರುದ್ಧವಬೂ ಸರಿತಾ ನಾಯರ್ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT