ಶಿವಸೇನೆ ನಿಯೋಗದ ರಾಜ್ಯಪಾಲರ ಭೇಟಿ 
ದೇಶ

ಮುಗಿಯದ 'ಮಹಾ' ಸಂಕಟ: ಕುತೂಹಲ ಕೆರಳಿಸಿದ ಶಿವಸೇನೆ ನಿಯೋಗದ ರಾಜ್ಯಪಾಲರ ಭೇಟಿ

ಶಾಸಕ ಆದಿತ್ಯ ಠಾಕ್ರೆ ಸೇರಿದಂತೆ ಶಿವಸೇನೆ ಮುಖಂಡರ ನಿಯೋಗಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಇಲ್ಲಿನ ರಾಜಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದೆ. 

ಮುಂಬೈ: ಶಾಸಕ ಆದಿತ್ಯ ಠಾಕ್ರೆ ಸೇರಿದಂತೆ ಶಿವಸೇನೆ ಮುಖಂಡರ ನಿಯೋಗಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಇಲ್ಲಿನ ರಾಜಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದೆ. ಚುನಾವಣೆ ಫಲಿತಾಂಶ ಬಂದು ವಾರವಾದರೂ ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಮಾತುಕತೆ ಮುಗಿದಿಲ್ಲ, ಸರ್ಕಾರ ರಚನೆ ಬಿಕ್ಕಟ್ಟು ಬಗೆಹರಿದಿಲ್ಲ. ಈ ಹಿನ್ನೆಲೆಯಲ್ಲಿ ಶಿವಸೇನೆ ನಿಯೋಗದ ರಾಜ್ಯಪಾಲರ ಭೇಟಿ ಇನ್ನಷ್ಟು ಕುತೂಹಲ ಕೆರಳಿಸಿದೆ.

ರಾಜ್ಯದಲ್ಲಿನ ಅಕಾಲಿಕ ಮಳೆಯಿಂದ ಬಳಲುತ್ತಿರುವ ರೈತರಿಗೆ ನಿಯೋಗ ತ್ವರಿತ ಆರ್ಥಿಕ ನೆರವು ಕೋರಿದೆ ಎಂದು ಸೇನಾ ಮುಖಂಡರೊಬ್ಬರು ತಿಳಿಸಿದ್ದಾರೆ. ಮಹಾರಾಷ್ಟ್ರ ಸಚಿವ ಏಕನಾಥ್ ಶಿಂಧೆ ಸೇರಿದಂತೆ ಹಲವು ನಾಯಕರಿದ್ದ ನಿಯೋಗ ರಾಜ್ಯಪಾಲರ ಭೇಟಿ ಮಾಡಿದೆ.ಶಿಂಧೆ ಶಿವಸೇನೆಯ ಪರ ವಿಧಾನಸಭೆ ನಾಯಕರಾಗಿ ಆಯ್ಕೆಗೊಂಡಿದ್ದಾರೆ.

ಬಿಜೆಪಿಯೊಂದಿಗಿನ ಆಡಳಿತ ರಚನೆ ಮಾತುಕತೆ ಬಗೆಗೆ ಕೇಳಲಾಗಿ ಆದಿತ್ಯ ಠಾಕ್ರೆ ತಮ್ಮ ಪಕ್ಷವು ಬಿಜೆಪಿಯಿಂದ ಏನನ್ನೂ ಕೇಳಿಲ್ಲ ಎಂದು ಹೇಳಿದರು ಅವರ ಮೈತ್ರಿಕೂಟ ಸಂಕಟದಲ್ಲಿ ಸಿಕ್ಕಿದೆ ಆದರೆ ನಮ್ಮ ತಂದೆ ಮತ್ತು ಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಸರ್ಕಾರ ರಚನೆಗೆ ಅಂತಿಮ ಕರೆ ನೀಡಲಿದ್ದಾರೆ ಎಂದು  ಹೇಳಿದ್ದಾರೆ.

ಆದಿತ್ಯ ಠಾಕ್ರೆ ರಾಜ್ಯಪಾಲರ ಭೇಟಿ ನಂತರ ಂಆದ್ಯಮಗಳೊಡನೆ ಂಆತನಾಡಿದ್ದು ತಾವು "ರೈತರ ಸಮಸ್ಯೆ" ಕುರಿತು ಚರ್ಚಿಸಿದ್ದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT