ಗಣ್ಯರಿಂದ ಗೌರವ ನಮನ 
ದೇಶ

ಮಾಜಿ ಪ್ರಧಾನಿ ಇಂದಿರಾ ಗಾಂಧಿ 35ನೇ ಪುಣ್ಯತಿಥಿ: ಸೋನಿಯಾ, ಡಾ ಮನಮೋಹನ್ ಸಿಂಗ್ ರಿಂದ ಗೌರವ ನಮನ 

ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 35ನೇ ಪುಣ್ಯತಿಥಿ ಅಂಗವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವರು ದೆಹಲಿಯ ಶಕ್ತಿ ಸ್ಥಳದಲ್ಲಿರುವ ಇಂದಿರಾ ಗಾಂಧಿ ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದರು.

ನವದೆಹಲಿ: ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 35ನೇ ಪುಣ್ಯತಿಥಿ ಅಂಗವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವರು ದೆಹಲಿಯ ಶಕ್ತಿ ಸ್ಥಳದಲ್ಲಿರುವ ಇಂದಿರಾ ಗಾಂಧಿ ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದರು.


ಇಂದು ಬೆಳಗ್ಗೆ ಇಂದಿರಾ ಗಾಂಧಿಯವರನ್ನು ನೆನೆಸಿಕೊಂಡ ಪ್ರಧಾನಿ ನರೇಂದ್ರ ಮೋದಿ, ದೇಶದ ಹಿಂದಿನ ಪ್ರಧಾನ ಮಂತ್ರಿ ಶ್ರೀಮತಿ ಇಂದಿರಾ ಗಾಂಧಿಯವರಿಗೆ ವಿನಯ ಶ್ರದ್ಧಾಂಜಲಿ ಎಂದು ಟ್ವೀಟ್ ಮಾಡಿದ್ದಾರೆ.


ವಿದೇಶ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ತಮ್ಮ ಅಜ್ಜಿಯವರನ್ನು ನೆನೆದು ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ. ಅವರ ತತ್ವಗಳು ತಮ್ಮ ಜೀವನಕ್ಕೆ ಮಾರ್ಗದರ್ಶನದ ಶಕ್ತಿಯಾಗಿದೆ. ಇಂದು ನನ್ನ ಅಜ್ಜಿಯವರ ಪುಣ್ಯತಿಥಿಯಾಗಿದೆ. ನಿಮ್ಮ ಕಬ್ಬಿಣದಂತಹ ಧೈರ್ಯದ ನಿರ್ಧಾರಗಳು ನನಗೆ ಪ್ರತಿ ಹೆಜ್ಜೆಯಲ್ಲಿಯೂ ಮಾರ್ಗದರ್ಶನವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.


ಇಂದಿರಾ ಗಾಂಧಿಯವರು ದೇಶ ಕಂಡ ಮೊದಲ ಮಹಿಳಾ ಪ್ರಧಾನಿ. ಅವರು 1966ರಿಂದ 1977ರವರೆಗೆ ಮತ್ತು 1980ರಿಂದ ಅವರ ಹತ್ಯೆ 1984ರವರೆಗೆ ಪ್ರಧಾನಿಯಾಗಿ ಅಧಿಕಾರ ನಡೆಸಿದ್ದರು. ಅವರ ಅಂಗರಕ್ಷಕರಿಂದಲೇ ಅವರು 1884ರ ಅಕ್ಟೋಬರ್ 31ರಂದು ಹತ್ಯೆಗೀಡಾಗಿದ್ದರು. 


ಅಮೃತಸರದ ಸ್ವರ್ಣ ಮಂದಿರದಲ್ಲಿ ಆಪರೇಷನ್ ಬ್ಲೂಸ್ಟಾರ್ ಬಳಿಕ ಇಂದಿರಾ ಗಾಂಧಿ ಹತ್ಯೆಗೀಡಾಗಿದ್ದರು. ಸ್ವರ್ಣ ಮಂದಿರದಲ್ಲಿ ಆಶ್ರಯ ಪಡೆದಿದ್ದ ಸಿಖ್ ಪ್ರತ್ಯೇಕತಾವಾದಿಗಳನ್ನು ಮಣಿಸಲು ಭಾರತೀಯ ಸೇನೆಗೆ ಇಂದಿರಾ ಗಾಂಧಿಯವರು ಆರಪೇಷನ್ ಬ್ಲೂಸ್ಟಾರ್ ನಡೆಸಲು ಆದೇಶಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಜೊತೆ ವ್ಯವಹಾರ ನಡೆಸುವ ದೇಶಗಳ ಮೇಲೆ ಶೇ.25ರಷ್ಟು ಸುಂಕ: Donald Trump

ಯುದ್ಧಕ್ಕೂ ಸಿದ್ದ-ಮಾತುಕತೆಗೂ ಬದ್ಧ ಎಂದ ಇರಾನ್ ಸರ್ಕಾರ: ಮೃತರ ಸಂಖ್ಯೆ 648ಕ್ಕೆ ಏರಿಕೆ

SSLC ಪೂರ್ವಸಿದ್ಧತಾ ಪರೀಕ್ಷೆ: ಉತ್ತಮ Resultಗಾಗಿ ಶಿಕ್ಷಕರಿಂದಲೇ ಪ್ರಶ್ನೆಪತ್ರಿಕೆ ಲೀಕ್, 6 ಮಂದಿ ಬಂಧನ..!

'ರಾಜಕೀಯ ಲಾಭಕ್ಕಾಗಿ ವಿರೋಧ ಪಕ್ಷದವರು ಸುಳ್ಳು ಹೇಳುತ್ತಿದ್ದಾರೆ; 592 ಚುನಾವಣಾ ಭರವಸೆಗಳಲ್ಲಿ 243ನ್ನು ಕಾಂಗ್ರೆಸ್ ಈಡೇರಿಸಿದೆ': ಸಿದ್ದರಾಮಯ್ಯ

ಬಾಂಗ್ಲಾದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲೆ ನಿಲ್ಲದ ದೌರ್ಜನ್ಯ: ಆಟೋ ಚಾಲಕನ ಬರ್ಬರ ಹತ್ಯೆ

SCROLL FOR NEXT