ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಸ್ಫೋಟ 
ದೇಶ

ಮಹಾರಾಷ್ಟ್ರ: ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಸ್ಫೋಟ, 20 ಸಾವು, 50 ಜನರಿಗೆ ಗಾಯ

ಮಹಾರಾಷ್ಟ್ರದಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 20 ಮಂದಿ ಸಾವಿಗೀಡಾಗಿ 50ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ.

ಮುಂಬೈ: ಮಹಾರಾಷ್ಟ್ರದಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 20 ಮಂದಿ ಸಾವಿಗೀಡಾಗಿ 50ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ.

ಮಹಾರಾಷ್ಟ್ರದ ಶಿರ್‌ಪುರದ ವಾಘಾಡಿ ಗ್ರಾಮದಲ್ಲಿ ಶನಿವಾರ ರಾಸಾಯನಿಕ ಕಾರ್ಖಾನೆಯಲ್ಲಿ ಈ ಬೃಹತ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ. ಅಂತೆಯೇ ಘಟನೆಯಲ್ಲಿ 50 ಮಂದಿ ಗಾಯಗೊಂಡಿದ್ದು, ಕಾರ್ಖಾನೆಯೊಳಗೆ ಇನ್ನೂ ಎಪ್ಪತ್ತುಕ್ಕೂ ಹೆಚ್ಚು ಜನರು ಸಿಲುಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡವನ್ನು ನಿಯೋಜಿಸಲಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಶಿರ್ಪುರದ ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮದ ರಾಸಾಯನಿಕ ಕಂಪನಿ ಕಾಂಪೌಂಡ್ ಒಳಗೆ ಸ್ಫೋಟ ಸಂಭವಿಸಿದೆ. ಸ್ಫೋಟ ಎಷ್ಟು ತೀವ್ರವಾಗಿತ್ತೆಂದರೆ ಸುತ್ತಮುತ್ತಲಿನ ಹಳ್ಳಿಗಳಲ್ಲೂ ಕೂಡ ಕಂಪನ ಉಂಟಾಗಿದೆ. ಕಪ್ಪು ಹೊಗೆಯ ಧೂಳು ಇಡೀ ಪ್ರದೇಶವನ್ನು ಆವರಿಸಿದ್ದು,  ಜನರನ್ನು ಸಾಗಿಸಲು ರಕ್ಷಣಾ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಇನ್ನು ಎಂಐಡಿಸಿಯ ಆವರಣವು ನಗರದಿಂದ ದೂರವಿರುವುದರಿಂದ, ಹಲವಾರು ಕಾರ್ಮಿಕರು ತಮ್ಮ ಕುಟುಂಬಗಳೊಂದಿಗೆ ಕಂಪನಿಯ ಆವರಣದಲ್ಲಿ ವಾಸಿಸುತ್ತಾರೆ. ಪ್ರತ್ಯಕ್ಷದರ್ಶಿಗಳು ನೀಡಿರುವ ಮಾಹಿತಿ ಅನ್ವಯ ಈ ಸ್ಫೋಟದ ಸಮಯದಲ್ಲಿ ಸುಮಾರು 100 ಕಾರ್ಮಿಕರು ಕಾರ್ಖಾನೆಯೊಳಗೆ ಇದ್ದರು ಎನ್ನಲಾಗಿದೆ.. ಗಾಯಗೊಂಡವರಲ್ಲಿ ಕಾರ್ಖಾನೆ ಕಾಂಪೌಂಡ್‌ನಲ್ಲಿ ವಾಸಿಸುವ ಹಲವಾರು ಅಪ್ರಾಪ್ತ ಮಕ್ಕಳು ಸೇರಿದ್ದಾರೆ ಎನ್ನಲಾಗಿದೆ. 

ಈಗ ಗಾಯಾಳುಗಳನ್ನು ಉಪ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿರುವವರನ್ನು ಈ ಪ್ರದೇಶದ ಖಾಸಗಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಒಟ್ಟಾರೆ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ