ಎನ್ ಆರ್ ಸಿ 
ದೇಶ

ಎನ್ ಆರ್ ಸಿಯಿಂದ ಹೊರಗುಳಿದವರಿಗೆ ಎಲ್ಲಾ ಹಕ್ಕುಗಳು ಸಿಗಲಿವೆ, ಆದರೆ.....: ವಿದೇಶಾಂಗ ಇಲಾಖೆ ಹೇಳಿದ್ದಿಷ್ಟು

ಎನ್ ಆರ್ ಸಿಯಿಂದ ಹೊರಗುಳಿದವರು ನಿರಾಶ್ರಿತರಲ್ಲ, ಕಾನೂನಿನ ಅಡಿಯಲ್ಲಿ ಸಿಗಬಹುದಾದ ಎಲ್ಲಾ ನೆರವುಗಳನ್ನು ಪಡೆಯುವವರೆಗೆ  ಎಲ್ಲಾ ಹಕ್ಕುಗಳು ದೊರೆಯಲಿವೆ ಎಂದು ವಿದೇಶಾಂಗ ಇಲಾಖೆ ಹೇಳಿದೆ. 

ನವದೆಹಲಿ: ಎನ್ ಆರ್ ಸಿಯಿಂದ ಹೊರಗುಳಿದವರು ನಿರಾಶ್ರಿತರಲ್ಲ, ಕಾನೂನಿನ ಅಡಿಯಲ್ಲಿ ಸಿಗಬಹುದಾದ ಎಲ್ಲಾ ನೆರವುಗಳನ್ನು ಪಡೆಯುವವರೆಗೆ ಎಲ್ಲಾ ಹಕ್ಕುಗಳು ದೊರೆಯಲಿವೆ ಎಂದು ವಿದೇಶಾಂಗ ಇಲಾಖೆ ಹೇಳಿದೆ. 

ಎನ್ ಆರ್ ಸಿ ಪಟ್ಟಿಯಿಂದ ಹೊರಗುಳಿಯುವುದರಿಂದ ಅಸ್ಸಾಂ ನಲ್ಲಿರುವ ನಾಗರಿಕರ ಹಕ್ಕುಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈ ಹಿಂದಿದ್ದ ಹಕ್ಕುಗಳು ಸಿಗಲಿವೆ. ಎಲ್ಲಾ ಕಾನೂನು ನೆರವು ಪೂರ್ಣಗೊಂಡು ಅಂತಿಮ ಹಂತ ತಲುಪುವವರೆಗೆ ಎಲ್ಲಾ ಹಕ್ಕುಗಳು ದೊರೆಯುತ್ತವೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.

3.3 ಕೋಟಿ ಅರ್ಜಿದಾರರ ಪೈಕಿ 19 ಲಕ್ಷ ಜನರನ್ನು ಎನ್ ಆರ್ ಸಿ ಪಟ್ಟಿಯಿಂದ ಹೊರಗಿಡಲಾಗಿದೆ. ಅಂತಿಮ ಪಟ್ಟಿಯಲ್ಲಿ ಇಲ್ಲದವರನ್ನು ಬಂಧಿಸಲಾಗುವುದಿಲ್ಲ. ಅವರಿಗೆ ಕಾನೂನು ನೆರವು ಲಭ್ಯವಾಗಲಿದೆ. ಎಲ್ಲಾ ಕಾನೂನು ಪ್ರಕ್ರಿಯೆ ಮುಕ್ತಾಯಗೊಳ್ಳುವವರೆಗೂ ಎನ್ ಆರ್ ಸಿಯಲ್ಲಿ ಇಲ್ಲದೇ ಇರುವವರಿಗೆ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಎಂಇಎ ವಕ್ತಾರ ರವೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT