ಪಿ.ಚಿದಂಬರಂ, 
ದೇಶ

ದೇಶದ ಆರ್ಥಿಕ ದುಸ್ಥಿತಿಗೆ ನರೇಂದ್ರ ಮೋದಿಯೇ ಹೊಣೆ: ಪಿ.ಚಿದಂಬರಂ

ದೇಶದಲ್ಲಿನ ಆರ್ಥಿಕ ಬೆಳವಣಿಗೆ ಕುಸಿತಕ್ಕೆ ನರೇಂದ್ರ ಮೋದಿಯೇ ಹೊಣೆ ಎಂದಿರುವ ಮಾಜಿ ಸಚಿವ ಪಿ.ಚಿದಂಬರಂ, ಶೇ.5ರಷ್ಟು ಜಿಡಿಪಿ ಎಂದರೇನು ಗೊತ್ತಿದೆಯೆ ಎಂದು ಕೇಂದ್ರ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ನವದೆಹಲಿ: ದೇಶದಲ್ಲಿನ ಆರ್ಥಿಕ ಬೆಳವಣಿಗೆ ಕುಸಿತಕ್ಕೆ ನರೇಂದ್ರ ಮೋದಿಯೇ ಹೊಣೆ ಎಂದಿರುವ ಮಾಜಿ ಸಚಿವ ಪಿ.ಚಿದಂಬರಂ, ಶೇ.5ರಷ್ಟು ಜಿಡಿಪಿ ಎಂದರೇನು ಗೊತ್ತಿದೆಯೆ ಎಂದು ಕೇಂದ್ರ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
  
ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ ಬಂಧನದಲ್ಲಿರುವ ಅವರು, ಮಂಗಳವಾರ ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯದ ಹೊರಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಅವರ ಸಿಬಿಐ ಕಸ್ಟಡಿಯನ್ನು ನ್ಯಾಯಾಲಯ ಸೆಪ್ಟೆಂಬರ್ 5 ರವರೆಗೆ ವಿಸ್ತರಿಸಿದೆ.
  
2019-20ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಕುಸಿತಕ್ಕೆ ಕೇಂದ್ರ ಸರ್ಕಾರದ ನೀತಿಗಳೆ ಕಾರಣ. ಶೇ.5 ಎಂದರೇನು? ನಿಮಗೆ ಶೇ.5 ನೆನಪಿದೆಯೇ ಎಂದು ಮಾಧ್ಯಮಗಳತ್ತ ಕೈಸನ್ನೆ ಮಾಡಿ ತೋರಿಸಿದರು. 

ಇದಾಗಿ ಕೆಲವು ಗಂಟೆಗಳ ನಂತರ, ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟ್ಟರ್ ಪುಟದಲ್ಲಿ ಪಿ.ಚಿದಂಬರಂ ಅವರ ವೀಡಿಯೋವನ್ನು ಹಂಚಿಕೊಂಡಿದೆ. ಅವರು ಬಿಜೆಪಿ ಸರ್ಕಾರದಿಂದ ಏಕೆ ಭಯಭೀತರಾಗಿದ್ದಾರೆ ಎಂಬುದನ್ನು ಜ್ಞಾಪಿಸಿದ್ದಾರೆ ಎಂಬ ಶೀರ್ಷಿಕೆಯೊಂದಿಗೆ ಈ ವೀಡಿಯೊವನ್ನು ಪೋಸ್ಟ್ ಮಾಡಿದೆ.

 ಪಕ್ಷದ ಪ್ರಕಾರ,  ಚಿದಂಬರಂ ಅವರು ಇತ್ತೀಚಿನ ಜಿಡಿಪಿ ಅಂಕಿಅಂಶವನ್ನು ಸೂಚಿಸುತ್ತಿದ್ದಾರೆ. ಇದು ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಕಳೆದ ಆರು ವರ್ಷಗಳಲ್ಲಿ ಅತ್ಯಂತ ಕಡಿಮೆ ಶೇ.5ಕ್ಕೆ ತಲುಪಿದೆ ಎಂಬುದರ ಸೂಚನೆ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT