ಸೋನಿಯಾ ಗಾಂಧಿ ಭೇಟಿಯಾದ ಅಲ್ಕಾ ಲಂಬಾ 
ದೇಶ

ಮತ್ತೆ ಕಾಂಗ್ರೆಸ್ ಸೇರಲಿರುವ ಅಲ್ಕಾ ಲಂಬಾ? ರೆಬೆಲ್ ಎಎಪಿ ನಾಯಕಿಯಿಂದ ಸೋನಿಯಾ ಭೇಟಿ

2020 ರ ಆರಂಭದಲ್ಲಿ ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷದ ಬಂಡಾಯ ಶಾಸಕಿ ಅಲ್ಕಾ ಲಂಬಾ ಅವರು ಮಂಗಳವಾರ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾಗಿದ್ದಾರೆ.

ನವದೆಹಲಿ: 2020 ರ ಆರಂಭದಲ್ಲಿ ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷದ ಬಂಡಾಯ ಶಾಸಕಿ ಅಲ್ಕಾ ಲಂಬಾ ಅವರು ಮಂಗಳವಾರ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾಗಿದ್ದಾರೆ.

ಗಾಂಧಿಯವರೊಂದಿಗೆ ಲಂಬಾ 50 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದು ಚರ್ಚೆಯು ಯಾವ ವಿಷಯಗಳ ಮೇಲೆ ನಡೆದಿದೆ ಎನ್ನುವುದು ಮಾತ್ರ ಇನ್ನೂ ತಿಳಿದುಬಂದಿಲ್ಲ.

ಕಳೆದ ಕೆಲವು ದಿನಗಳಿಂದ, ಲಂಬಾ ಕಾಂಗ್ರೆಸ್ ಪಕ್ಷ ಸೇರುವ ಕುರಿತಂತೆ ಸುಳಿವು ನಿಡಿದ್ದಂತೆ ಕಾಂಗ್ರೆಸ್ ಆಯೋಜಿಸಿದ್ದ ಕಾರ್ಯಕ್ರಮಗಳಿಗೆ ಹಾಜರಾಗಿದ್ದರು. ಇತ್ತೀಚೆಗೆ, ದಿವಂಗತ ರಾಜೀವ್ ಗಾಂಧಿಯವರ 75 ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ವೀರಭೂಮಿಯಲ್ಲಿ ಎಐಸಿಸಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದ್ದರು.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಕ್ಷದೊಂದಿಗಿನ ಭಿನ್ನಾಭಿಪ್ರಾಯಗಳನ್ನು ಉಲ್ಲೇಖಿಸಿ ಅವರು ಏಪ್ರಿಲ್ 4 ರಂದು ಎಎಪಿಗೆ ರಾಜೀನಾಮೆ ನೀಡಿದ್ದರು. "ನೀವು ದಿವಂಗತ ಕಾಂಗ್ರೆಸ್ ಮುಖಂಡ ಶೀಲಾ ದೀಕ್ಷಿತ್ ಅವರನ್ನು ಭ್ರಷ್ಟರೆಂದು ಕರೆದಿದ್ದೀರಿ ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಮೈತ್ರಿಗೆ ಬಯಸುತ್ತೀರಿ" ಎಂದು ಅವರು ಕೇಜ್ರಿವಾಲ್ ವಿರುದ್ಧ ಕಿಡಿ ಕಾರಿದ್ದಾರೆ.

ಎಎಪಿಗೆ ಸೇರುವ ಮೊದಲು ಕಾಂಗ್ರೆಸ್ ಮಹಿಳಾ ವಿಭಾಗದ ಸದಸ್ಯೆಯಾಗಿದ್ದ ಲಂಬಾ ಮುಂದಿನ ಚುನಾವಣೆಯಲ್ಲಿ ತಾವು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿಯುವುದಾಗಿ ಆಗಸ್ಟ್ ನಲ್ಲಿ ಘೋಷಿಸಿದ್ದರು.

ಎಎಪಿ ಟಿಕೆಟ್‌ನಲ್ಲಿ 2013 ರ ದೆಹಲಿ ಚುನಾವಣೆಯಲ್ಲಿ ಅವರು ಚಾಂದನಿ ಚೌಕ್ ವಿಧಾನಸಭಾ ಸ್ಥಾನದಿಂದ ಆಯ್ಕೆಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT