ಸೋನಿಯಾ ಗಾಂಧಿ ಭೇಟಿಯಾದ ಅಲ್ಕಾ ಲಂಬಾ 
ದೇಶ

ಮತ್ತೆ ಕಾಂಗ್ರೆಸ್ ಸೇರಲಿರುವ ಅಲ್ಕಾ ಲಂಬಾ? ರೆಬೆಲ್ ಎಎಪಿ ನಾಯಕಿಯಿಂದ ಸೋನಿಯಾ ಭೇಟಿ

2020 ರ ಆರಂಭದಲ್ಲಿ ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷದ ಬಂಡಾಯ ಶಾಸಕಿ ಅಲ್ಕಾ ಲಂಬಾ ಅವರು ಮಂಗಳವಾರ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾಗಿದ್ದಾರೆ.

ನವದೆಹಲಿ: 2020 ರ ಆರಂಭದಲ್ಲಿ ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷದ ಬಂಡಾಯ ಶಾಸಕಿ ಅಲ್ಕಾ ಲಂಬಾ ಅವರು ಮಂಗಳವಾರ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾಗಿದ್ದಾರೆ.

ಗಾಂಧಿಯವರೊಂದಿಗೆ ಲಂಬಾ 50 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದು ಚರ್ಚೆಯು ಯಾವ ವಿಷಯಗಳ ಮೇಲೆ ನಡೆದಿದೆ ಎನ್ನುವುದು ಮಾತ್ರ ಇನ್ನೂ ತಿಳಿದುಬಂದಿಲ್ಲ.

ಕಳೆದ ಕೆಲವು ದಿನಗಳಿಂದ, ಲಂಬಾ ಕಾಂಗ್ರೆಸ್ ಪಕ್ಷ ಸೇರುವ ಕುರಿತಂತೆ ಸುಳಿವು ನಿಡಿದ್ದಂತೆ ಕಾಂಗ್ರೆಸ್ ಆಯೋಜಿಸಿದ್ದ ಕಾರ್ಯಕ್ರಮಗಳಿಗೆ ಹಾಜರಾಗಿದ್ದರು. ಇತ್ತೀಚೆಗೆ, ದಿವಂಗತ ರಾಜೀವ್ ಗಾಂಧಿಯವರ 75 ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ವೀರಭೂಮಿಯಲ್ಲಿ ಎಐಸಿಸಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದ್ದರು.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಕ್ಷದೊಂದಿಗಿನ ಭಿನ್ನಾಭಿಪ್ರಾಯಗಳನ್ನು ಉಲ್ಲೇಖಿಸಿ ಅವರು ಏಪ್ರಿಲ್ 4 ರಂದು ಎಎಪಿಗೆ ರಾಜೀನಾಮೆ ನೀಡಿದ್ದರು. "ನೀವು ದಿವಂಗತ ಕಾಂಗ್ರೆಸ್ ಮುಖಂಡ ಶೀಲಾ ದೀಕ್ಷಿತ್ ಅವರನ್ನು ಭ್ರಷ್ಟರೆಂದು ಕರೆದಿದ್ದೀರಿ ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಮೈತ್ರಿಗೆ ಬಯಸುತ್ತೀರಿ" ಎಂದು ಅವರು ಕೇಜ್ರಿವಾಲ್ ವಿರುದ್ಧ ಕಿಡಿ ಕಾರಿದ್ದಾರೆ.

ಎಎಪಿಗೆ ಸೇರುವ ಮೊದಲು ಕಾಂಗ್ರೆಸ್ ಮಹಿಳಾ ವಿಭಾಗದ ಸದಸ್ಯೆಯಾಗಿದ್ದ ಲಂಬಾ ಮುಂದಿನ ಚುನಾವಣೆಯಲ್ಲಿ ತಾವು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿಯುವುದಾಗಿ ಆಗಸ್ಟ್ ನಲ್ಲಿ ಘೋಷಿಸಿದ್ದರು.

ಎಎಪಿ ಟಿಕೆಟ್‌ನಲ್ಲಿ 2013 ರ ದೆಹಲಿ ಚುನಾವಣೆಯಲ್ಲಿ ಅವರು ಚಾಂದನಿ ಚೌಕ್ ವಿಧಾನಸಭಾ ಸ್ಥಾನದಿಂದ ಆಯ್ಕೆಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT