ಯೋಗಿ ಆದಿತ್ಯನಾಥ್ - ಸ್ವಾಮಿ ಚಿನ್ಮಯಾನಂದ್ 
ದೇಶ

ಚಿನ್ಮಯಾನಂದ್ ಕೇಸ್: ಶಹಜಾನ್ಪುರ್ ವಿದ್ಯಾರ್ಥಿನಿಯನ್ನು ಬೇರೆ ಕಾಲೇಜ್ ಗೆ ವರ್ಗಾಯಿಸಲು ಸುಪ್ರೀಂ ಆದೇಶ

ಬಿಜೆಪಿ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಸ್ವಾಮಿ ಚಿನ್ಮಯಾನಂದ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಎಲ್ಎಲ್ಎಂ ವಿದ್ಯಾರ್ಥಿನಿ ಹಾಗೂ ಆಕೆಯ ಸಹದೋರನನ್ನು ಬರೇಲಿ ವಿಶ್ವವಿದ್ಯಾಲಯದ

ನವದೆಹಲಿ: ಬಿಜೆಪಿ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಸ್ವಾಮಿ ಚಿನ್ಮಯಾನಂದ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಎಲ್ಎಲ್ಎಂ ವಿದ್ಯಾರ್ಥಿನಿ ಹಾಗೂ ಆಕೆಯ ಸಹದೋರನನ್ನು ಬರೇಲಿ ವಿಶ್ವವಿದ್ಯಾಲಯದ ಇತರೆ ಕಾಲೇಜ್ ಗಳಿಗೆ ವರ್ಗಾವಣೆ ಮಾಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್ ಭಾನುಮತಿ ಮತ್ತು ಎಎಸ್ ಬೋಪಣ್ಣ ಅವರು, ನಮಗೆ ಆ ವಿದ್ಯಾರ್ಥಿಗಳ ಭವಿಷ್ಯ ಮುಖ್ಯ. ಹೀಗಾಗಿ ಮೊದಲು ಅವರನ್ನು ಬೇರೆ ಕಾಲೇಜ್ ಗೆ ವರ್ಗಾಯಿಸಿ ಎಂದು ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದ್ದಾರೆ.

ವಿದ್ಯಾರ್ಥಿನಿ ಪ್ರಸ್ತುತ ಉತ್ತರ ಪ್ರದೇಶದ ಶಹಜಾನ್ಪುರ್ ಚಿನ್ಮಯಾನಂದ್ ಆಶ್ರಮಕ್ಕೆ ಸೇರಿದ ಕಾಲೇಜ್ ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಸಂತ ಸಮುದಾಯದ ಹಿರಿಯ ನಾಯಕರೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ತಾಣಗಳಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದಳು. ಬಳಿಕ ಆರು ದಿನಗಳ ಕಾಲ ವಿದ್ಯಾರ್ಥಿನಿ ನಾಪತ್ತೆಯಾಗಿದ್ದಳು.

ವಿದ್ಯಾರ್ಥಿನಿ ಚಿನ್ಮಯಾನಂದ್ ಅವರ ಹೆಸರನ್ನು ನೇರವಾಗಿ ಹೇಳಿಲ್ಲ. ಆದರೆ ಮಾಜಿ ಕೇಂದ್ರ ಸಚಿವರು ತಮ್ಮ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ವಿದ್ಯಾರ್ಥಿನಿ ತಂದೆ ಆರೋಪಿಸಿದ್ದರು.

ಈ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಹಿಂದಿನದನ್ನು ಮರೆತುಬಿಡಿ, ಭವಿಷ್ಯದತ್ತ ಗಮನಹರಿಸಿ, ವಿಷನ್ 2047ಕ್ಕೆ ಒತ್ತು ನೀಡಿ': ಸಚಿವರಿಗೆ ಪ್ರಧಾನಿ ಮೋದಿ ಸಲಹೆ

ಅಮೆರಿಕ ಲೆಕ್ಕಾಚಾರವೇ ತಲೆಕೆಳಗೆ: Iran ನಿಂದ ವೇಗವಾಗಿ ಶಸ್ತ್ರಾಸ್ತ್ರ ನೆಲೆಗಳ ಪುನರ್‌ನಿರ್ಮಾಣ, ಈಗಾಗಲೇ ಡ್ರೋನ್ ಉತ್ಪಾದನೆ ಆರಂಭ: ವರದಿ

'ಗೃಹಲಕ್ಷ್ಮಿ ಹಣ ಕೊಡಿಸಿ'; ಹೈಕೋರ್ಟ್ ಮೆಟ್ಟಿಲೇರಿದ ಮಹಿಳೆಯರು, ಸರ್ಕಾರಕ್ಕೆ ನೋಟಿಸ್ ಜಾರಿ

IPL 2026: 'ಹಾರ್ದಿಕ್ ಪಾಂಡ್ಯ ತಂಡದ ವಾತಾವರಣ ಹಾಳು ಮಾಡಿದರು, ರೋಹಿತ್ ಶರ್ಮಾರ ಗೌರವ ಮರಳಿಸಿ': ಮುಂಬೈ ಇಂಡಿಯನ್ಸ್ ಗೆ ಸಲಹೆ

Ghar wapasi: ಪಾಸ್ಟರ್ ಸಹಿತ ಹಿಂದೂ ಧರ್ಮಕ್ಕೆ ಮರಳಿದ 200 ಮಂದಿ

SCROLL FOR NEXT