ಸೋನಿಯಾ ಗಾಂಧಿ 
ದೇಶ

ಕಾಂಗ್ರೆಸ ಪಕ್ಷಕ್ಕೆ ಹೊಸ ಚೈತನ್ಯ: ಮೇಜರ್ ಸರ್ಜರಿಗೆ ಸೋನಿಯಾ ಸಜ್ಜು

ಕಾಂಗ್ರೆಸ್ ಪಕ್ಷಕ್ಕೆ ಹೊಸ ಚೈತನ್ಯ ನೀಡಲು ಮೇಜರ್  ಸರ್ಜರಿಗೆ     ಪಕ್ಷದ ಮುಖ್ಯಸ್ಥೆ  ಸೋನಿಯಾ ಗಾಂಧಿ ಮುಂದಾಗಿದ್ದು, ಅದರಂತೆ ಅನೇಕ ರಾಜ್ಯಗಳಿಗೆ ಹೊಸ ಅಧ್ಯಕ್ಷರ ನೇಮಕವಾಗಲಿದೆ.  

ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ಹೊಸ ಚೈತನ್ಯ ನೀಡಲು ಮೇಜರ್  ಸರ್ಜರಿಗೆ     ಪಕ್ಷದ ಮುಖ್ಯಸ್ಥೆ  ಸೋನಿಯಾ ಗಾಂಧಿ ಮುಂದಾಗಿದ್ದು, ಅದರಂತೆ ಅನೇಕ ರಾಜ್ಯಗಳಿಗೆ ಹೊಸ ಅಧ್ಯಕ್ಷರ ನೇಮಕವಾಗಲಿದೆ.  

ಶತಮಾನದಷ್ಟು ಹಳೆಯದಾದ ಪಕ್ಷಕ್ಕೆ ಸಾಂಸ್ಥಿಕ, ಹೊಸ ರೂಪ ಕೊಡಲು ದೆಹಲಿ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಲು ಸೋನಿಯಾ ಸಜ್ಜಾಗಿದ್ದಾರೆ ಎನ್ನಲಾಗಿದೆ. 

ಶೀಲಾ ದೀಕ್ಷಿತ್ ಅವರ ನಿಧನದ ನಂತರ ದೆಹಲಿಯಲ್ಲಿ ಅಧ್ಯಕ್ಷರ ಹುದ್ದೆ ಖಾಲಿ ಇದ್ದು, ಕಮಲ್ ನಾಥ್ ಅವರು ಮಧ್ಯಪ್ರದೇಶದಲ್ಲೂ ಮುಖ್ಯಮಂತ್ರಿಯಾದ ನಂತರವೂ ಅಧ್ಯಕ್ಷರ ಹುದ್ದೆಯಲ್ಲಿ  ಮುಂದುವರಿದಿದ್ದಾರೆ. 

ಅದೇ ರೀತಿ ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ ಅವರು ಈ ಹುದ್ದೆಯಿಂದ ಕೆಳಗಿಳಿಯುವುದಾಗಿ ಹೇಳಿದ್ದಾರೆ. ಅವರ ಬದಲಿಗೆ ಹೊಸ ಅಧ್ಯಕ್ಷರನ್ನು ಶೀಘ್ರದಲ್ಲೇ ಘೋಷಿಸುವ ಸಾಧ್ಯತೆಯಿದೆ ಎನ್ನಲಾಗಿದೆ. 

ರಾಜೀನಾಮೆ ಹಿಂಪಡೆಯಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಮಾಡಿದ ಮನವಿಯನ್ನು ರಾಹುಲ್ ಗಾಂಧಿ ತಿರಸ್ಕರಿಸಿದ ನಂತರ ಆಗಸ್ಟ್ 10 ರಂದು ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅಧಿಕಾರ ವಹಿಸಿಕೊಂಡಿದ್ದಾರೆ. 

ರಾಜಸ್ಥಾನದಲ್ಲಿ ಸಚಿನ್ ಪೈಲಟ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಎರಡು ಹುದ್ದೆ ಹುದ್ದೆ ಅಲಂಕರಿಸಿದ್ದಾರೆ.  ಅನೇಕ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯಗಳ ಉಸ್ತುವಾರಿಗಳೂ ಸಹ ಬದಲಾಗುವ ಸಾಧ್ಯತೆಯಿದೆ ಎಂದೂ ಹೇಳಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT