ದೇಶ

ದೇಶದಲ್ಲಿ ಕಾನೂನಿಗಿಂತಲೂ ರಾಜಕೀಯ ದ್ವೇಷ ಬಲವಾಗಿದೆ- ಕೇಂದ್ರ ಸರ್ಕಾರದ ವಿರುದ್ಧ ಡಿಕೆಶಿ ವಾಗ್ದಾಳಿ

Nagaraja AB

ನವದೆಹಲಿ:ರಾಜಕೀಯ ದ್ವೇಷದಿಂದ ತಮ್ಮನ್ನು 9 ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಲಾಗುತ್ತಿದೆ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್  ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನೋಟ್ ರದ್ದತಿ ವೇಳೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 13ರವರೆಗೂ ಜಾರಿನಿರ್ದೇಶನಾಲಯದ ವಶಕ್ಕೆ ಒಪ್ಪಿಸಿ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ತೀರ್ಪು ಪ್ರಕಟಿಸಿದ ಬಳಿಕ ಏಳು ಸೆಕೆಂಡ್ ಗಳ ವಿಡಿಯೋವನ್ನು ಟ್ವೀಟರ್ ನಲ್ಲಿ ಪೋಸ್ಟ್ ಮಾಡಿರುವ ಡಿಕೆ ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ..

ದೇಶದಲ್ಲಿ ಕಾನೂನಿಗಿಂತಲೂ ರಾಜಕೀಯ ದ್ವೇಷ ಬಲವಾಗಿದೆ ಎಂದು ಅವರು ಟ್ವೀಟರ್ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ

SCROLL FOR NEXT