ಚಿಕನ್ ಬಿರಿಯಾನಿ 
ದೇಶ

ಉತ್ತರಪ್ರದೇಶ: ಹಿಂದುಗಳಿಗೆ ಬಲವಂತದ 'ಬಾಡೂಟ', 43 ಮುಸ್ಲಿಂರ ವಿರುದ್ಧ ಪ್ರಕರಣ

ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ನಡೆದ ಉರ್ಸ್ ಉತ್ಸವದಲ್ಲಿ ಹಿಂದೂಗಳಿಗೆ ಬಲವಂತವಾಗಿ ಬಿರಿಯಾನಿ ತಿನ್ನಿಸಿದ ಆರೋಪದ ಮೇಲೆ 43 ಮಂದಿ ಮುಸ್ಲಿಂರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಉತ್ತರಪ್ರದೇಶ: ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ನಡೆದ ಉರ್ಸ್ ಉತ್ಸವದಲ್ಲಿ ಹಿಂದೂಗಳಿಗೆ ಬಲವಂತವಾಗಿ ಬಿರಿಯಾನಿ ತಿನ್ನಿಸಿದ ಆರೋಪದ ಮೇಲೆ 43 ಮಂದಿ ಮುಸ್ಲಿಂರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 

ಆಗಸ್ಟ್ 31ರಂದು ಚಾರ್ಖಾರಿ ಪ್ರದೇಶದ ಸಲಾತ್ ಗ್ರಾಮದಲ್ಲಿ ಶೇಖ್ ಪೀರ್ ಬಾಬ್ ಅವರ ಉರ್ಸ್ ಸಂದರ್ಭದಲ್ಲಿ ಈ ಉರ್ಸ್ ಅನ್ನು ಆಯೋಜಿಸಲಾಗಿತ್ತು. ಈ ವೇಳೆ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸಿ ಬಿರಿಯಾನಿಯನ್ನು ಉದ್ದೇಶಪೂರ್ವಕವಾಗಿ ನೀಡಲಾಗುತ್ತಿತ್ತು ಎಂದು ಆರೋಪಿಸಲಾಗಿತ್ತು. 

ಬಿಜೆಪಿ ಶಾಸಕ ಬ್ರಿಜ್ಛೂಷಣ್ ರಾಜಪೂತ್ ಅವರು ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದ್ದು ಈ ಹಿನ್ನೆಲೆಯಲ್ಲಿ ಪೊಲೀಸರು 43 ಮುಸ್ಲಿಂರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

43 ಮುಸ್ಲಿಂರ ವಿರುದ್ಧ 153ಎ(ಧರ್ಮದ ನೆಲೆಯಲ್ಲಿ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295ಎ(ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು), 420(ವಂಚನೆ) ಮತ್ತು 506(ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಳೆ ಅರ್ಧಕ್ಕೆ ಹಾರಲಿದೆ ತ್ರಿವರ್ಣ ಧ್ವಜ; ದೇಶಾದ್ಯಂತ ಶೋಕಾಚರಣೆ: ಕತಾರ್‌ನ ಮಾಜಿ ಅಮೀರ್ ನಿಧನಕ್ಕೆ PM ಮೋದಿ ಸಂತಾಪ

ಅಮೆರಿಕ ಜೊತೆ ಒಪ್ಪಂದ 'ಮುಗಿದಿದೆ': ಹೊಸ ದಾಳಿಗಳ ಬೆನ್ನಲ್ಲೇ ಇರಾನ್ ಘೋಷಣೆ

ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

'ಊಸರವಳ್ಳಿಯಂತೆ ಬದಲಾಗ್ತಾರೆ': ಹಿಂದಿ ಬರಲ್ಲ ಅಂತ ಪೋಸ್ ಕೊಟ್ಟೋರು, ದೆಹಲಿಯ CJPಯಲ್ಲಿ ಹಿಂದಿಯಲ್ಲೇ ಭಾಷಣ; ನೆಟ್ಟಿಗರು ಗರಂ, Video

'ಮಾ ಇಂಟಿ ಬಂಗಾರಂ' ಜಾಗತಿಕ ಬಾಕ್ಸ್ ಆಫೀಸ್ ನಲ್ಲಿ 100 ಕೋಟಿ ರೂ ಕಲೆಕ್ಷನ್! ನಾಯಕಿ ಪ್ರಧಾನ ಚಿತ್ರದ ಯಶಸ್ಸಿನ ಗುಟ್ಟು ಹಂಚಿಕೊಂಡ ಸಮಂತಾ!