ಚಿದಂಬರಂ ಮತ್ತು ಕಾರ್ತಿ 
ದೇಶ

ಏರ್ಷೆಲ್- ಮ್ಯಾಕ್ಸಿಸ್ ಪ್ರಕರಣ: ಚಿದಂಬರಂ ಮತ್ತು ಪುತ್ರ ಕಾರ್ತಿಗೆ ಜಾಮೀನು

ಏರ್ಸೆಲ್ -ಮ್ಯಾಕ್ಸಿಸ್ ಪ್ರಕರಣದಲ್ಲಿ ದೆಹಲಿ ಕೋರ್ಟ್, ಗುರುವಾರ ಕೇಂದ್ರದ ಮಾಜಿ ಸಚಿವ, ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ನವದೆಹಲಿ: ಏರ್ಸೆಲ್ -ಮ್ಯಾಕ್ಸಿಸ್ ಪ್ರಕರಣದಲ್ಲಿ ದೆಹಲಿ ಕೋರ್ಟ್, ಗುರುವಾರ ಕೇಂದ್ರದ ಮಾಜಿ ಸಚಿವ, ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಪಿ.ಚಿದಂಬರಂ ಮತ್ತು ಕಾರ್ತಿ ವಿರುದ್ಧ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಪ್ರಕರಣ ದಾಖಲಿಸಿತ್ತು. ವಿಶೇಷ ಜಡ್ಜ್ ಒಪಿ ಸೈನಿ ಚಿದಂಬರಂ ಮತ್ತು ಅವರ ಪುತ್ರನಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.

ತಲಾ ಒಂದು ಲಕ್ಷ ರು. ವಯಕ್ತಿಕ ಬಾಂಡ್,  ನೀಡುವುದರ ಜೊತೆಗೆ ತನಿಖೆಗೆ ಸಹಕರಿಸುವಂತೆ ಷರತ್ತು ವಿಧಿಸಲಾಗಿದೆ. 

2006ರಲ್ಲಿ  ಹಣಕಾಸು ಸಚಿವರಾಗಿದ್ದ ಚಿದಂಬರಂ ವಿದೇಶಿ ಹೂಡಿಕೆ ಪ್ರೋತ್ಸಾಹ ಮಂಡಳಿ (ಎಫ್ಐಪಿಬಿ) ಅನುಮೋದನೆ ಮೂಲಕ ಹೇಗೆ ಆರ್ಥಿಕ ಅವ್ಯವಹಾರ ನಡೆಸಲು ಬಳಸಿಕೊಂಡಿದ್ದಾರೆ ಎನ್ನುವ ಕುರಿತಂತೆ ಸಿಬಿಐ ತನಿಖೆ ನಡೆಸುತ್ತಿದೆ.

ಹಿರಿಯ ಕಾಂಗ್ರೆಸ್ ಮುಖಂಡ ಚಿದಂಬರಂ ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ 3,500 ಕೋಟಿ ರೂ.ಮತ್ತು ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ 305 ಕೋಟಿ ರೂ. ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT