ದೇಶ

ದೇಶದಲ್ಲಿ ಆರ್ಥಿಕ ಬಿಕ್ಕಟ್ಟು: ಕೇಂದ್ರ ಸರ್ಕಾರದ ಮೌನ ಅಪಾಯಕಾರಿ- ಪ್ರಿಯಾಂಕ ಗಾಂಧಿ

Nagaraja AB

ನವದೆಹಲಿ: ಭಾರತದಲ್ಲಿ ಎದುರಾಗಿರುವ ಆರ್ಥಿಕ ಬಿಕ್ಕಟ್ಟಿನ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮೌನ ತಾಳಿರುವುದು ತುಂಬಾ ಅಪಾಯಕಾರಿ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಟೀಕಿಸಿದ್ದಾರೆ.

ಮನ್ನಿಸುವಿಕೆ ಅಥವಾ ವಾಕ್ಚಾತುರ್ಯ  ಕೆಲಸ ಮಾಡುವುದಿಲ್ಲ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ದೇಶದ ಜನರಿಗೆ ಭರವಸೆ ನೀಡಲು ಕೇಂದ್ರ ಸರ್ಕಾರಕ್ಕೆ ಪರಿಹಾರ ಅಥವಾ ಶಕ್ತಿಯೂ ಇಲ್ಲದಂತಾಗಿದೆ ಎಂದು ಆರೋಪಿಸಿರುವ ಅವರು,  ಈ ವಿಷಯದಲ್ಲಿ ಕಾರಣಗಳು, ವಾಕ್ಚಾತುರ್ಯ ಮತ್ತು ಮನ್ನಿಸುವಿಕೆ ಕೆಲಸ ಮಾಡುವುದಿಲ್ಲ ಎಂದು ಆರ್ಥಿಕತೆಯಲ್ಲಿ ಬಿಕ್ಕಟ್ಟು ಎಂಬ ಹ್ಯಾಶ್ ಟ್ಯಾಗ್ ಮೂಲಕ ಟ್ವೀಟ್ ಮಾಡಿದ್ದಾರೆ.

SCROLL FOR NEXT