ರತುಲ್ ಪುರಿ 
ದೇಶ

ಅಗಸ್ಟಾ ವೆಸ್ಟ್‌ ಲ್ಯಾಂಡ್‌ ಹಗರಣ: ಕಮಲ್‌ನಾಥ್‌ ಅಳಿಯ ರತುಲ್ ಪುರಿ 6 ದಿನ ಇಡಿ ವಶಕ್ಕೆ

ಅಗಸ್ಟಾ ವೆಸ್ಟ್‌ ಲ್ಯಾಂಡ್‌ ಹೆಲಿಕಾಪ್ಟರ್‌ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರ ಸೋದರಳಿಯ ರತುಲ್ ಪುರಿ ಅವರನ್ನು ಆರು ದಿನಗಳ ಕಾಲ ಜಾರಿ ನಿರ್ದೇಶನಾಲಯ(ಇಡಿ) ಕಸ್ಟಡಿಗೆ ನೀಡಿ ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ಆದೇಶಿಸಿದ್ದಾರೆ. 

ನವದೆಹಲಿ: ಅಗಸ್ಟಾ ವೆಸ್ಟ್‌ ಲ್ಯಾಂಡ್‌ ಹೆಲಿಕಾಪ್ಟರ್‌ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರ ಸೋದರಳಿಯ ರತುಲ್ ಪುರಿ ಅವರನ್ನು ಆರು ದಿನಗಳ ಕಾಲ ಜಾರಿ ನಿರ್ದೇಶನಾಲಯ(ಇಡಿ) ಕಸ್ಟಡಿಗೆ ನೀಡಿ ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ಆದೇಶಿಸಿದ್ದಾರೆ. 

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ರತುಲ್ ಪುರಿ ವಿರುದ್ಧ ಕೇಸ್ ದಾಖಲಾಗಿದ್ದು, ಇಟಲಿ ಮೂಲದ ಫಿನ್‌ಮೆಕಾನಿಕಾದ ಬ್ರಿಟಿಷ್ ಅಂಗಸಂಸ್ಥೆಯಾದ ಅಗಸ್ಟಾ ವೆಸ್ಟ್‌ ಲ್ಯಾಂಡ್‌ನಿಂದ 12 ವಿವಿಐಪಿ ಹೆಲಿಕಾಫ್ಟರ್‌ ಖರೀದಿಸಿದ ಅಕ್ರಮಗಳ ಹಿನ್ನೆಲೆಯಲ್ಲಿ ಇಡಿ ಪ್ರಕರಣ ದಾಖಲಿಸಿದೆ.

ಪಿಎಂಎಲ್‌ಎ ನಿಬಂಧನೆಗಳ ಅಡಿಯಲ್ಲಿ ಸಂಪೂರ್ಣ ಹಣದ ಜಾಲ ಮತ್ತು ಅಪರಾಧವನ್ನು ಪತ್ತೆಹಚ್ಚಲು ಪುರಿ ಮತ್ತು ಇತರ ಆರೋಪಿಗಳನ್ನು ಕಸ್ಟಡಿಗೆ ನೀಡುವಂತೆ ಇಡಿ ಕೋರಿತ್ತು. 

ಇಡಿ ಪರವಾಗಿ ವಾದಗಳನ್ನು ಕೇಳಿದ ನಂತರ, ನ್ಯಾಯಾಧೀಶರು, ವಾಸ್ತವ ಮತ್ತು ಸನ್ನಿವೇಶಗಳನ್ನು ಗಮನದಲ್ಲಿಟ್ಟುಕೊಂಡು, ರತುಲ್ ಪುರಿಯನ್ನು 6 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡುವುದು ಸೂಕ್ತವೆಂದು ನಾನು ಭಾವಿಸುತ್ತೇನೆ ಎಂದರು.

ಪುರಿಯನ್ನು ವೈದ್ಯಕೀಯವಾಗಿ ಪರೀಕ್ಷಿಸಲು ಮತ್ತು ಅವರ ವೈದ್ಯರ ಸಮಾಲೋಚನೆಯ ನಂತರ ಅವರ ಔಷಧಿಗಳನ್ನು ತೆಗೆದುಕೊಳ್ಳಲು ಅನುಮತಿ ನೀಡುವಂತೆ ತನಿಖಾ ಸಂಸ್ಥೆಗೆ ನಿರ್ದೇಶಿಸಲಾಯಿತು. ತನಿಖೆ ವೇಳೆ ಪುರಿಗೆ ಅವರ ವಕೀಲರಿಂದ ಸಹಾಯವನ್ನು ಸಹ ನೀಡಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ