ತರುಣ್ ಗೋಗೊಯ್ 
ದೇಶ

ಅಸ್ಸಾಂ ಎನ್ ಆರ್ ಸಿ: ಪ್ರತೀಕ್ ಹಜಿಲಾ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿಲ್ಲ,ಸಿಜೆಐಗೆ ತರುಣ್ ಗೊಗೊಯ್ ಪತ್ರ

ಕಳೆದ ವಾರ ಪ್ರಕಟಗೊಂಡ ರಾಷ್ಟ್ರೀಯ ಪೌರತ್ವ ನೋಂದಣಿ- ಎನ್ ಆರ್ ಸಿ ಅಂತಿಮ ಪಟ್ಟಿ ತಯಾರಿಯಲ್ಲಿ ಎನ್ ಆರ್ ಸಿ ರಾಜ್ಯ ಸಮನ್ವಯಾಧಿಕಾರಿ  ಪ್ರತೀಕ್ ಹಜಿಲಾ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿಲ್ಲ, ಈ ವಿಚಾರವನ್ನು ಪುನರ್ ಪರಿಶೀಲಿಸುವಂತೆ ಹಿರಿಯ ಕಾಂಗ್ರೆಸ್ ಮುಖಂಡ ತರುಣ್ ಗೋಗೊಯ್  ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾರೆ.

ಗುವಾಹಟಿ: ಕಳೆದ ವಾರ ಪ್ರಕಟಗೊಂಡ ರಾಷ್ಟ್ರೀಯ ಪೌರತ್ವ ನೋಂದಣಿ- ಎನ್ ಆರ್ ಸಿ ಅಂತಿಮ ಪಟ್ಟಿ ತಯಾರಿಯಲ್ಲಿ ಎನ್ ಆರ್ ಸಿ ರಾಜ್ಯ ಸಮನ್ವಯಾಧಿಕಾರಿ  ಪ್ರತೀಕ್ ಹಜಿಲಾ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿಲ್ಲ, ಈ ವಿಚಾರವನ್ನು ಪುನರ್ ಪರಿಶೀಲಿಸುವಂತೆ ಹಿರಿಯ ಕಾಂಗ್ರೆಸ್ ಮುಖಂಡ ತರುಣ್ ಗೋಗೊಯ್  ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾರೆ.

ಅಸ್ಸಾಂನಲ್ಲಿ ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ಮಾಡಲಾಗಿರುವ ರಾಷ್ಟ್ರೀಯ ಪೌರತ್ವ ನೋಂದಣಿ  ಪಟ್ಟಿಯಲ್ಲಿ 19 ಲಕ್ಷ ಜನರ ಹೆಸರನ್ನು ಕೈಬಿಡಲಾಗಿದೆ.

ಎನ್ ಆರ್ ಸಿ ಅಂತಿಮ  ಪಟ್ಟಿ ತಯಾರಿಕೆಗಾಗಿ 50 ಸಾವಿರ ಸರ್ಕಾರಿ ಅಧಿಕಾರಿಗಳನ್ನು ಬಳಸಿಕೊಂಡು 1 ,200 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ . ಆದಾಗ್ಯೂ, ಹಜಿಲಾ ಸುಪ್ರೀಂಕೋರ್ಟ್ ಆದೇಶವನ್ನು ಪಾಲನೆ ಮಾಡಿಲ್ಲ ಎಂದು ಗೋಗಯ್ ಸಿಜೆಐಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಎನ್ ಆರ್ ಸಿ ಪಟ್ಟಿಯಿಂದ ಕೈ ಬಿಡಲಾಗಿರುವ ಲಕ್ಷಾಂತರ ಜನರ ಭವಿಷ್ಯದ ಪ್ರಶ್ನೆ ಎದುರಾಗಿದೆ.  ನಾಗರಿಕತ್ವ ಸಾಬೀತುಪಡಿಸಲು ವಿದೇಶಿ ನ್ಯಾಯಾಧೀಕರಣದ ಬಳಿ ಹೋದರೆ ಕಿರುಕುಳ ಅನುಭವಿಸುತ್ತಾರೆ. ಅದು ಅವರ ತಪ್ಪಲ್ಲ, ಎನ್ ಆರ್ ಸಿ ಪ್ರಾಧಿಕಾರದ ಅದಕ್ಷತೆಯಿಂದಾಗಿ ಈ ಸಮಸ್ಯೆಯಾಗಿದೆ ಎಂದು ಅವರು ಹೇಳಿದ್ದಾರೆ.

ಎನ್ ಆರ್ ಸಿ ಪಟ್ಟಿಯಲ್ಲಿ ಹೆಸರು ಇಲ್ಲದವರನ್ನು 1966 ಮತ್ತು 2019ರ ಮತದಾರರ ಪಟ್ಟಿಯಿಂದಲೂ ಕೈಬಿಡಲಾಗಿದೆ.  ಭಾರತೀಯ ಪೌರತ್ವವನ್ನು ಕಾನೂನುಬದ್ದವಾಗಿ ಪಡೆಯಲು ಮಾರ್ಚ್ 24, 1971ರನ್ನು ಕಡೆಯ ದಿನ ಎನ್ನಲಾಗಿದೆ. ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗವೇ ಸಿದ್ಧಪಡಿಸಿದ್ದು, ಈಗ ಹೇಗೆ ಎನ್ ಆರ್ ಸಿ ಪಟ್ಟಿಯಿಂದ ಕೈ ಬಿಡಲಾಗಿದೆ ಎಂದು ಅವರು ಪ್ರಶ್ನಿಸಿದ್ದಾರೆ.

ತಮ್ಮ ದೃಷ್ಟಿಕೋನದಲ್ಲಿ ಕೇಂದ್ರ ಸರ್ಕಾರ ಸಂಪೂರ್ಣವಾಗಿ ವೈಫಲ್ಯಕ್ಕೊಳಗಾಗಿದೆ. ಭಾರತೀಯ ಸಂವಿಧಾನದಿಂದ ನೀಡಿರುವ ಜೀವ, ಸ್ವಾತಂತ್ಯ್ಯ, ಘನತೆಯನ್ನು ಕಿತ್ತುಕೊಳ್ಳಲು ಆಗುವುದಿಲ್ಲ. ಈ ವಿಚಾರದ ಬಗ್ಗೆ ಪುನರ್ ಪರಿಶೀಲಿಸುವಂತೆ ಅವರು ಮುಖ್ಯ ನ್ಯಾಯಾಧೀಶರ ಬಳಿ ಮನವಿ ಮಾಡಿಕೊಂಡಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT