ಶೆಹ್ಲಾ ರಶೀದ್ 
ದೇಶ

ಕಾಶ್ಮೀರ ನಿರ್ಬಂಧಗಳ ಬಗ್ಗೆ ಟ್ವೀಟ್: ಶೆಹ್ಲಾ ರಶೀದ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

ಜಮ್ಮು ಮತ್ತು ಕಾಶ್ಮೀರದಲ್ಲಿನ ನಿರ್ಬಂಧಗಳ ಬಗ್ಗೆ ಮತ್ತು ಭಾರತೀಯ ಸೇನೆಯ ಕುರಿತು ಟ್ವೀಟ್ ಮಾಡಿದ್ದ ಜಮ್ಮು - ಕಾಶ್ಮೀರ ಪೀಪಲ್ಸ್ ಮೂವ್ ಮೆಂಟ್ ನಾಯಕಿ ಶೆಹ್ಲಾ ರಶೀದ್ ವಿರುದ್ಧ ದೆಹಲಿ ಪೊಲೀಸರು....

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿನ ನಿರ್ಬಂಧಗಳ ಬಗ್ಗೆ ಮತ್ತು ಭಾರತೀಯ ಸೇನೆಯ ಕುರಿತು ಟ್ವೀಟ್ ಮಾಡಿದ್ದ ಜಮ್ಮು - ಕಾಶ್ಮೀರ ಪೀಪಲ್ಸ್ ಮೂವ್ ಮೆಂಟ್ ನಾಯಕಿ ಶೆಹ್ಲಾ ರಶೀದ್ ವಿರುದ್ಧ ದೆಹಲಿ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಶೀದ್ ಅವರು ಭಾರತೀಯ ಸೇನೆಯ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ವಕೀಲ ಅಲೋಕ್ ಶ್ರೀವಾಸ್ತವ್ ಅವರು ದೂರು ನೀಡಿದ್ದರು. ಈ ದೂರಿನ ಅನ್ವಯ ದೆಹಲಿ ಪೊಲೀಸರು ಶೆಹ್ಲಾ ರಶೀದ್ ವಿರುದ್ಧ ಭಾರತೀಯ ದಂಡ ಸಂಹಿತೆ 124 ಎ, 153 ಎ, 153, 504, 505 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

"ಭಾರತೀಯ ಸೇನೆಯ ಕುರಿತಾಗಿ ಶೆಹ್ಲಾ ರಶೀದ್ ಮಾಡಿದ ಆರೋಪ ಸಂಪೂರ್ಣ ಸುಳ್ಳಾಗಿದ್ದು, ತನ್ನ ಆರೋಪಕ್ಕೆ ಯಾವುದೇ ಸಾಕ್ಷಿಯನ್ನು ಒದಗಿಸಿಲ್ಲ. ಈ ಮಾಹಿತಿಯನ್ನು ಆಧರಿಸಿ ಅಂತರಾಷ್ಟ್ರೀಯ ಮಾಧ್ಯಮಗಳು ಸುದ್ದಿ ಪ್ರಕಟಿಸಿವೆ. ಈ ಮೂಲಕ ಭಾರತದ ಹೆಸರಿಗೆ ಕಳಂಕ ತರಲಾಗಿತ್ತು. ಇದೀಗ ದೆಹಲಿ ಪೊಲೀಸರು ಪ್ರಕರಣ ದಾಖಲು ಮಾಡಿರುವುದು ತೃಪ್ತಿ ತಂದಿದೆ. ಕಠಿಣ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿರುವುದರಿಂದ ಬಂಧನ ಆಗುವ ವಿಶ್ವಾಸ ಇದೆ" ಎಂದು ದೂರುದಾರ ವಕೀಲ ಅಲೋಕ್ ಶಿವಾಸ್ತವ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಕಾನೂನು ಸುವ್ಯವಸ್ಥೆ ಕಾಪಾಡುವ ಯಾವುದೇ ಅಧಿಕಾರವಿಲ್ಲ ಎಂದು ಜನರು ಹೇಳುತ್ತಿದ್ದಾರೆ. ಅವರನ್ನು ಶಕ್ತಿ ಹೀನರನ್ನಾಗಿ ಮಾಡಲಾಗಿದೆ. ಎಲ್ಲವೂ ಅರೆ ಸೈನಿಕರ ಕೈಯಲ್ಲಿದೆ. ಸಿಆರ್ ಪಿಎಫ್ ಸಿಬಂಧಿ ಸೂಚನೆ ಮೇರೆಗೆ ಎಸ್.ಎಚ್.ಓ ಒಬ್ಬರನ್ನು ವರ್ಗಾವಣೆ ಮಾಡಲಾಗಿದೆ. ಅಲ್ಲದೆ ಸಶಸ್ತ್ರ ಪಡೆಗಳು ರಾತ್ರಿ ಮನೆಗೆ ನುಗ್ಗಿ ದರೋಡೆ ಮಾಡುತ್ತಿವೆ ಎಂದು ಶೆಹ್ಲಾ ರಶೀದ್ ಟ್ವೀಟ್ ಮೂಲಕ ಆರೋಪ ಮಾಡಿದ್ದರು. ರಶೀದ್ ಆರೋಪವನ್ನು ಭಾರತೀಯ ಸೇನೆ ತಳ್ಳಿಹಾಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT