ರವೀಶ್ ಕುಮಾರ್ 
ದೇಶ

ರಾಷ್ಟ್ರಪತಿಗಳ ವಿಮಾನ ಹಾರಾಟಕ್ಕೆ ವಾಯುಪ್ರದೇಶ ನಿರಾಕರಣೆ: ಪಾಕ್‌ ನಿರ್ಧಾರಕ್ಕೆ ಭಾರತ ವಿಷಾದ

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿದ್ದ ವಿಮಾನ ಹಾರಾಟಕ್ಕೆ ತನ್ನ ವಾಯು ಪ್ರದೇಶವನ್ನು ನಿರಾಕರಿಸಿರುವ ಪಾಕಿಸ್ತಾನ ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಭಾರತ ಶನಿವಾರ ತೀವ್ರ ವಿಷಾದ ವ್ಯಕ್ತಪಡಿಸಿದೆ.

ನವದೆಹಲಿ: ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿದ್ದ ವಿಮಾನ ಹಾರಾಟಕ್ಕೆ ತನ್ನ ವಾಯು ಪ್ರದೇಶವನ್ನು ನಿರಾಕರಿಸಿರುವ ಪಾಕಿಸ್ತಾನ ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಭಾರತ ಶನಿವಾರ ತೀವ್ರ ವಿಷಾದ ವ್ಯಕ್ತಪಡಿಸಿದೆ.

ಇಂತಹ ಏಕಪಕ್ಷೀಯ ಕ್ರಮಗಳ ನಿರರ್ಥಕತೆಯನ್ನು ಗುರುತಿಸಲು ನಾವು ಪಾಕಿಸ್ತಾನಕ್ಕೆ ಕರೆ ನೀಡುತ್ತೇವೆ ಎಂದು ವಿದೇಶಾಂಕ ಇಲಾಖೆ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ.

ವಿವಿಐಪಿ ವಿಶೇಷ ಹಾರಾಟಕ್ಕೆ ಓವರ್‌ಫ್ಲೈಟ್ ಕ್ಲಿಯರೆನ್ಸ್ ನಿರಾಕರಿಸುವ ಪಾಕಿಸ್ತಾನ ಸರ್ಕಾರದ ನಿರ್ಧಾರಕ್ಕೆ ನಾವು ವಿಷಾದಿಸುತ್ತೇವೆ. ಯಾವುದೇ ಸಾಮಾನ್ಯ ದೇಶವು ವಾಡಿಕೆಯಂತೆ ಇದಕ್ಕೆ ಅನುಮತಿ ನೀಡುತ್ತದೆ ಎಂದು ಅವರು ಪಾಕ್ ನಡೆಯನ್ನು ಟೀಕಿಸಿದ್ದಾರೆ.

ಕೋವಿಂದ್ ಅವರು ಮೂರು ರಾಷ್ಟ್ರಗಳ ಪ್ರವಾಸಕ್ಕೆ ತೆರಳಲಿದ್ದು, ಐಸ್ ಲೆಂಡ್, ಸ್ವಿಟ್ಜರ್ಲೆಂಡ್ ಮತ್ತು ಸ್ಲೊವೇನಿಯಾದಲ್ಲಿ ಉನ್ನತ ಮಟ್ಟದ ನಾಯಕರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. ಹೀಗಾಗಿ ಅವರ ವಿಮಾನ ಪ್ರಯಾಣಕ್ಕಾಗಿ ಭಾರತ ಸರ್ಕಾರ ಪಾಕಿಸ್ತಾನದ ವಾಯುಗಡಿ ಬಳಕೆ ಮಾಡಲು ಅನುಮತಿ ಕೇಳಿತ್ತು. ಇದಕ್ಕೆ ಪಾಕಿಸ್ತಾನ ಸರ್ಕಾರ ನಿರಾಕರಿಸಿದ್ದು, ಭಾರತದ ಇತ್ತೀಚಿಗಿನ ನಡೆಯಿಂದಾಗಿ ತಾವು ಕೋವಿಂದ್ ಅವರಿಗೆ ವಾಯುಗಡಿ ಬಳಕೆಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಖಾರವಾಗಿ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT