ದೇಗುಲದ ಕಂಬಗಳ ಮೇಲೆ ಸಿಎಂ ಕೆಸಿಆರ್ ಚಿನ್ಹೆ 
ದೇಶ

ದೇಗುಲದ ಕಂಬಗಳ ಮೇಲೆ ಟಿಆರ್ ಎಸ್ ಚಿನ್ಹೆ, ಕೆಸಿಆರ್ ಮುಖ; ಹಿಂದೂಪರ ಸಂಘಟನೆಗಳ ತೀವ್ರ ಆಕ್ರೋಶ

ದೇಗುಲದ ಕಂಬಗಳ ಮೇಲೆ ಟಿಆರ್ ಎಸ್ ಪಕ್ಷದ ಚಿನ್ಹೆ ಮತ್ತು ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಅವರ ಮುಖ ಕೆತ್ತನೆ ಮಾಡಿದ್ದರಿಂದ ಹಿಂದೂಪರ ಸಂಘಟನೆಗಳು ಸರ್ಕಾರದ ಕ್ರಮದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ತೆಲಂಗಾಣದ ಯಾದಗಿರಿ ಜಿಲ್ಲೆಯ ಲಕ್ಷ್ಮೀ ನರಸಿಂಹ ಸ್ವಾಮಿ ದೇಗುಲದಲ್ಲಿ ಘಟನೆ

ಹೈದರಾಬಾದ್: ದೇಗುಲದ ಕಂಬಗಳ ಮೇಲೆ ಟಿಆರ್ ಎಸ್ ಪಕ್ಷದ ಚಿನ್ಹೆ ಮತ್ತು ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಅವರ ಮುಖ ಕೆತ್ತನೆ ಮಾಡಿದ್ದರಿಂದ ಹಿಂದೂಪರ ಸಂಘಟನೆಗಳು ಸರ್ಕಾರದ ಕ್ರಮದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ತೆಲಂಗಾಣದ ಯಾದಗಿರಿ ಜಿಲ್ಲೆಯಲ್ಲಿ ಹಳೆಯ ಲಕ್ಷ್ಮೀ ನರಸಿಂಹ ಸ್ವಾಮಿ ದೇಗುಲದ ಜೀರ್ಣೋದ್ದಾರ ಮಾಡಲಾಗುತ್ತಿದ್ದು, ಈ ದೇವಾಲದಲ್ಲಿ ನಿರ್ಮಿಸಲಾಗುತ್ತಿರುವ ಕಂಬಗಳಲ್ಲಿ ತೆಲಂಗಾಣದ ಆಡಳಿತಾರೂಢ ಪಕ್ಷ ಟಿಆರ್ ಎಸ್ ನ ಕಾರಿನ ಚಿನ್ಹೆ ಮತ್ತು ಸಿಎಂ ಚಂದ್ರಶೇಖರ್ ರಾವ್ ಅವರ ಮುಖವನ್ನು ಕೆತ್ತನೆ ಮಾಡಲಾಗಿದೆ. ದೇವಾಲಯದ ಸುಮಾರು ಐದು ಸಾವಿರಕ್ಕೂ ಅಧಿಕ ಜಾಗಗಳಲ್ಲಿ ಇಂತಹ ಕೆತ್ತನೆಗಳನ್ನು ಕೆತ್ತಲಾಗಿದೆ ಎಂದು ತಿಳಿದುಬಂದಿದೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಮತ್ತು ಸ್ಥಳೀಯ ಅಧಿಕಾರಿಗಳ ವಿರುದ್ಧ ಇದೀಗ ಭಜರಂಗದಳದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಕೆಸಿಆರ್ ಏನೂ ದೇವರಲ್ಲ. ಅವರ ರಾಜಕೀಯ ಉದ್ದೇಶಕ್ಕಾಗಿ ದೇವಾಲಯವನ್ನೂ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದೆ.

ಈ ಕುರಿತು ಮಾತನಾಡಿದ ಭಜರಂಗದಳದ ರಾಜ್ಯ ಘಟಕದ ವಕ್ತಾರ, ಸುಭಾಷ್, 'ಸರ್ಕಾರದ ಇಂತಹ ಕೃತ್ಯವನ್ನು ನಾವು ಬಲವಾಗಿ ಖಂಡಿಸುತ್ತೇವೆ. ಇತಿಹಾಸ ಪ್ರಸಿದ್ಧ ದೇಗುಲದಲ್ಲಿ ಇಂತಹ ಕೃತ್ಯ ಅಸಹನೀಯ. ಅಭಿವೃದ್ದಿ ಅಥವಾ ಜೀರ್ಣೋದ್ಧಾರದ ಹೆಸರಲ್ಲಿ ಸ್ವಾರ್ಥ ರಾಜಕೀಯಕ್ಕೆ ನಾವು ಅವಕಾಶ ನೀಡುವುದಿಲ್ಲ. ಇದು ಹಿಂದೂಗಳ ಧಾರ್ಮಿಕ ಭಾವನಕ್ಕೆ ಧಕ್ಕೆ ತರುವ ಸಂಗತಿಯಾಗಿದ್ದು, ಸಿಎಂ ಕೆಸಿಆರ್ ಕೂಡಲೇ ಕ್ಷಮೆ ಕೇಳಿ ಸ್ಥಂಬಗಳನ್ನು ಬದಲಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸುತ್ತೇವೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT