ಬಿಎಸ್ಪಿ ಮುಖಂಡ 
ದೇಶ

ಗೋ ಮೂತ್ರ ಕ್ಯಾನ್ಸರ್ ಗೆ ಮದ್ದು: ಕೇಂದ್ರ ಸಚಿವ ಚೌಬೆ ಹೇಳಿಕೆ ಟೀಕಿಸಿದ ಬಿಎಸ್ಪಿ

ಗೋ ಮೂತ್ರದಿಂದ ಮಾಡಿದ ಔಷಧಗಳು ಕ್ಯಾನ್ಸರ್ ರೋಗವನ್ನು ಗುಣಪಡಿಸಬಲ್ಲವು ಎಂದು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಚೌಬೆ ನೀಡಿರುವ ಹೇಳಿಕೆಯನ್ನು ಬಿಎಸ್ಪಿ ಮುಖಂಡ ಸುಧೀಂದ್ರ ಬಾಡೊರಿಯಾ ತೀವ್ರವಾಗಿ ಟೀಕಿಸಿದ್ದಾರೆ.

ನವದೆಹಲಿ: ಗೋ ಮೂತ್ರದಿಂದ ಮಾಡಿದ ಔಷಧಗಳು ಕ್ಯಾನ್ಸರ್ ರೋಗವನ್ನು ಗುಣಪಡಿಸಬಲ್ಲವು ಎಂದು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಚೌಬೆ ನೀಡಿರುವ ಹೇಳಿಕೆಯನ್ನು ಬಿಎಸ್ಪಿ ಮುಖಂಡ ಸುಧೀಂದ್ರ ಬಾಡೊರಿಯಾ ತೀವ್ರವಾಗಿ ಟೀಕಿಸಿದ್ದಾರೆ.

ಇಂತಹ ಗೊಂದಲಕಾರಿ ಹೇಳಿಕೆಗಳನ್ನು ನೀಡುವುದು ಅಶ್ವಿನಿ ಚೌಬೆ ಅವರ ಹವ್ಯಾಸವಾಗಿದೆ. ರಾಷ್ಟ್ರ ವಿಜ್ಞಾನ,, ತಂತ್ರಜ್ಞಾನ ಮತ್ತಿತರ ಕ್ಷೇತ್ರಗಳಲ್ಲಿ  ಪ್ರಗತಿಪಥದಲ್ಲಿ ಸಾಗುತ್ತಿರುವಾಗ  ಚೌಬೆ ಅವರ ಇಂತಹ ಹೇಳಿಕೆ ಮುಜುಗರವನ್ನುಂಟು ಮಾಡುತ್ತವೆ ಎಂದರು.

ಚೌಬೆ ಅವರ ಹೇಳಿಕೆ ಆಕ್ಷೇಪಾರ್ಹವಾಗಿವೆ. ಯಾವುದೇ ವೈಜ್ಞಾನಿಕ ಜ್ಞಾನ, ಪ್ರಯೋಗಾತ್ಮಕ ಹಾಗೂ ವೈದ್ಯಕೀಯ ಇಲಾಖೆ, ಆರೋಗ್ಯ ಸಚಿವಾಲಯೊಂದಿಗೆ ಸಮಾಲೋಚಿಸದೆ ಸರ್ಕಾರದ ಹಿರಿಯ ಸಚಿವರೊಬ್ಬರು ಇಂತಹ ಹೇಳಿಕೆಗಳನ್ನು ನೀಡುವುದು ಆಕ್ಷೇಪಾರ್ಹವಾಗಿವೆ ಎಂದು ಅವರು ಟೀಕಿಸಿದ್ದಾರೆ.

ಗೋ ಮೂತ್ರವನ್ನು ಅನೇಕ ಔಷಧಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಕ್ಯಾನ್ಸರ್ ನಂತರ ರೋಗವನ್ನು ಗುಣಪಡಿಸಬಲ್ಲಂತಹ ಔಷಧಗಳಿಗೆ ಇದನ್ನು ಬಳಸು್ತಾರೆ. ಆಯುಷ್ ಸಚಿವಾಲಯ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವುದಾಗಿ ಅಶ್ವಿನಿ ಚೌಬೆ ಶನಿವಾರ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT