ಸಂಗ್ರಹ ಚಿತ್ರ 
ದೇಶ

ರಾಮ್ ಜೇಠ್ಮಲಾನಿ ನಿಧನ; ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಸಂತಾಪ

ಭಾನುವಾರ ನಿಧನರಾದ ಖ್ಯಾತ ವಕೀಲ ರಾಮ್ ಜೇಠ್ಮಲಾನಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ರಾಜಕೀಯ ಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ.

ನವದೆಹಲಿ: ಭಾನುವಾರ ನಿಧನರಾದ ಖ್ಯಾತ ವಕೀಲ ರಾಮ್ ಜೇಠ್ಮಲಾನಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ರಾಜಕೀಯ ಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ರಾಷ್ಟ್ರಪತಿ ಕೋವಿಂದ್, ಜೇಠ್ಮಲಾನಿ ಅವರ ನಿಧನ ನಿಜಕ್ಕೂ ನೋವು ತಂದಿದೆ. ತಮ್ಮ ಅಭಿಪ್ರಾಯಗಳನ್ನು ಸಾರ್ವಜನಿಕವಾಗಿ ಯಾವುದೇ ಮುಲಾಜಿಲ್ಲದೇ ಹೇಳುತ್ತಿದ್ದ ಅವರ ಗುಣ ಅಪರೂಪವಾದದ್ದು. ಅವರ ನಿಧನದಿಂದಾಗಿ ದೇಶ ಶ್ರೇಷ್ಠ ನ್ಯಾಯಶಾಸ್ತ್ರಜ್ಞನನ್ನು ಕಳೆದುಕೊಂಡಿದೆ ಎಂದು ಕೋವಿಂದ್ ಟ್ವೀಟ್ ಮಾಡಿದ್ದಾರೆ. ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ತಮ್ಮ ಬುದ್ದಿಯಿಂದಲೇ ಮಾತನಾಡುತ್ತಿದ್ದ ಪಂಡಿತನನ್ನು ದೇಶ ಕಳೆದುಕೊಂಡಿದ್ದು, ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸರ್ಕಾರವನ್ನು ಖಂಡಿಸುತ್ತಿದ್ದ ಅವರ ಕಾರ್ಯ ವೈಖರಿ ಹಲವರಿಗೆ ಆದರ್ಶವಾಗಿತ್ತು. ಸಾಕಷ್ಚು ಜನರಿಗೆ ರಾಮ್ ಜೇಠ್ಮಲಾನಿ ಸಹಾಯ ಮಾಡಿದ್ದು, ಇದು ಅವರ ಜೀವನದ ಅಂಗವೇ ಆಗಿತ್ತು. ಅವರ ಆತ್ಮಕ್ಕೆ ಭಗವಂತ ಶಾಂತಿ ಕರುಣಿಸಲಿ ಎಂದು ಟ್ವೀಟ್ ಮಾಡಿದ್ದಾರೆ.

ಅಂತೆಯೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!