ರಾಜಸ್ಥಾನ ಗಡಿಯಲ್ಲಿ ಭಾರತೀಯ ಸೇನೆ ಕಣ್ಗಾವಲು 
ದೇಶ

ರಾಜಸ್ತಾನ ಗಡಿಯಲ್ಲಿ ಪಾಕ್ ಸೈನಿಕರ ಜಮಾವಣೆ: ಐಬಿ ಎಚ್ಚರಿಕೆ

ಪಾಕಿಸ್ತಾನ ರಾಜಸ್ತಾನ ಗಡಿಯಲ್ಲಿ ಹೆಚ್ಚುವರಿ ಸೈನಿಕರನ್ನು ನಿಯೋಜಿಸುತ್ತಿರುವ ಬಗ್ಗೆ ಗುಪ್ತಚರ ಇಲಾಖೆ ಕೇಂದ್ರ ಸರ್ಕಾರವನ್ನು ಎಚ್ಚರಿಸಿದೆ.

ನವದೆಹಲಿ: ಪಾಕಿಸ್ತಾನ ರಾಜಸ್ತಾನ ಗಡಿಯಲ್ಲಿ ಹೆಚ್ಚುವರಿ ಸೈನಿಕರನ್ನು ನಿಯೋಜಿಸುತ್ತಿರುವ ಬಗ್ಗೆ ಗುಪ್ತಚರ ಇಲಾಖೆ ಕೇಂದ್ರ ಸರ್ಕಾರವನ್ನು ಎಚ್ಚರಿಸಿದೆ.

ಇದರ ಜೊತೆಗೆ ಭಾರತದಲ್ಲಿ ಭಯೋತ್ಪಾದಕ ದಾಳಿ ನಡೆಸಲು, ಆಶಾಂತಿ ವಾತವರಣ ನಿರ್ಮಾಣ  ಮಾಡಲು ಇಸ್ಲಾಮಾಬಾದ್ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ನನ್ನು ರಹಸ್ಯವಾಗಿ ಬಿಡುಗಡೆ ಮಾಡಿದೆ ಎಂದೂ ಹೇಳಲಾಗಿದೆ.   

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ  370 ನೇ ವಿಧಿಯನ್ನು ಹಿಂತೆಗೆದುಕೊಂಡ ಕೇಂದ್ರದ ಕ್ರಮಕ್ಕೆ ಪ್ರತೀಕಾರವಾಗಿ ಸೇಡು ತೀರಿಸಿಕೊಳ್ಳಲು ಮುಂದಿನ ದಿನಗಳಲ್ಲಿ ಸಿಯಾಲ್ಕೋಟ್-ಜಮ್ಮು ಮತ್ತು ರಾಜಸ್ತಾನ ಗಡಿಯಲ್ಲಿ  ಪಾಕಿಸ್ತಾನ ದೊಡ್ಡ ಮಟ್ಟದ ದಾಳಿ ಮಾಡಲು ಸೈನಿಕರನ್ನು ನಿಯೋಜಿಸಲು ಹೊರಟಿದೆ ಎಂದು ಮಾಧ್ಯಮ ವರದಿ ಎಚ್ಚರಿಸಿದೆ. 

ಪಾಕಿಸ್ತಾನದ ಸೇನೆಯಿಂದ ಅಪಾಯ ತಪ್ಪಿಸಲು ಗಡಿ ಭದ್ರತಾ ಪಡೆ ಮತ್ತು ಜಮ್ಮು ಮತ್ತು ರಾಜಸ್ಥಾನ ವಲಯಗಳಲ್ಲಿನ ಸೇನಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಮತ್ತು ಪರಿಸ್ಥಿತಿ  ಎದುರಿಸಲು ಸನ್ನದ್ಧವಾಗಿರುವಂತೆ ಸೂಚಿಸಲಾಗಿದೆ ಎಂದೂ ಹೇಳಲಾಗಿದೆ . 

ಸರ್ಕಾರ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಮತ್ತು ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಕ್ರಮದ ನಂತರ ನವದೆಹಲಿಯೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆಯೇ ಭಾರತ  ಪಾಕ್ ನಡುವೆ ಯುದ್ದವಾದರೆ ಅದಕ್ಕೆ ವಿಶ್ವಸಮುದಾಯ   ಹೊಣೆಯಾಗಬೇಕಾಗುತ್ತದೆ ಎಂದೂ ಪಾಕ್ ಪ್ರಧಾನಿ ಎಚ್ಚರಿಸಿದ್ದಾರೆ. 

ಇದರ ಜೊತೆಗೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಜಾವೇದ್ ಬಜ್ವಾ, ನಾವು ಪರಿಸ್ಥಿತಿ ಎದುರಿಸಲು   ಯಾವ ಮಟ್ಟಕ್ಕೆ ಹೋಗಲು ಸಿದ್ದ ಎಂದು ಸವಾಲು ಹಾಕಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT