ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಶಾಲೆಯಲ್ಲಿ ಮಕ್ಕಳು ನೆಲ ಒರೆಸುವ ಫೋಟೋ ತೆಗೆದ ಪತ್ರಕರ್ತನ ಬಂಧನ

ಶಾಲೆಯಲ್ಲಿ ಕೆಲವು ಮಕ್ಕಳು ನೆಲ ಒರೆಸುತ್ತಿದ್ದ ಫೋಟೋ ತೆಗೆದ ಪತ್ರಕರ್ತನನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದು, ಅಜಂಗಢ ಜಿಲ್ಲಾಧಿಕಾರಿ ಈ ಕುರಿತು ತನಿಖೆಗೆ ಆದೇಶಿಸಿದ್ದಾರೆ.

ಅಜಂಗಢ: ಶಾಲೆಯಲ್ಲಿ ಕೆಲವು ಮಕ್ಕಳು ನೆಲ ಒರೆಸುತ್ತಿದ್ದ ಫೋಟೋ ತೆಗೆದ ಪತ್ರಕರ್ತನನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದು, ಅಜಂಗಢ ಜಿಲ್ಲಾಧಿಕಾರಿ ಈ ಕುರಿತು ತನಿಖೆಗೆ ಆದೇಶಿಸಿದ್ದಾರೆ.

ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪತ್ರಕರ್ತ ಸಂತೋಷ್ ಜೈಸ್ವಾಲ್ ಅವರನ್ನು ಬಂಧಿಸಲಾಗಿದೆ.

ಸಂತೋಷ್ ಜೈಸ್ವಾಲ್ ಅವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಅಜಂಗಢ ಸ್ಥಳೀಯ ಪತ್ರಕರ್ತರು ಆರೋಪಿಸಿದ್ದಾರೆ. ಅಲ್ಲದೆ ಈ ಸಂಬಂಧ ತಾವು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದ್ದು, ಅವರು ತನಿಖೆಗೆ ಆದೇಶಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತೀಚಿಗಷ್ಟೇ ಮಿರ್ಜಾಪುರದಲ್ಲಿ ಶಾಲಾ ಮಕ್ಕಳಿಗೆ ಬರೀ ರೊಟ್ಟಿ ಮತ್ತು ಉಪ್ಪು ನೀಡುತ್ತಿದ್ದನ್ನು ವಿಡಿಯೋ ಮಾಡಿದ ಪತ್ರಕರ್ತನನ್ನು ಬಂಧಿಸಲಾಗಿತ್ತು. 

ಸೆಪ್ಟೆಂಬರ್ 7ರಂದು ಬಿಜ್ನೋರ್ ನಲ್ಲಿ ಹ್ಯಾಂಡ್ ಪಂಪ್ ನಿಂದ ನೀರು ತೆಗೆದುಕೊಳ್ಳಲು ದಲಿತ ಕುಟುಂಬಕ್ಕೆ ನಿರ್ಬಂಧ ವಿಧಿಸಿದ್ದನ್ನು ವರದಿ ಮಾಡಿದಕ್ಕಾಗಿ ಐವರು ಪತ್ರಕರ್ತರ ವಿರುದ್ಧ ಕೇಸ್ ದಾಖಲಿಸಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: NDA ಸೀಟು ಹಂಚಿಕೆ ಅಂತಿಮ; ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ಇದೆಂಥಾ ಕ್ರೌರ್ಯ: ಮದ್ಯ ಮಾರಾಟ ನಿಷೇಧ ಉಲ್ಲಂಘಿಸಿದ್ದ ಬ್ರಾಹ್ಮಣನ ಟೀಕಿಸಿ ಪೋಸ್ಟ್; OBC ವ್ಯಕ್ತಿಗೆ ಅದೇ ಬ್ರಾಹ್ಮಣನ ಪಾದ ತೊಳೆದು ನೀರು ಕುಡಿಯುವ ಶಿಕ್ಷೆ!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ; ರಷ್ಯಾದ ಬಿಗ್ ವಾರ್ನಿಂಗ್ ಏನು?

SCROLL FOR NEXT