ಸಂಗ್ರಹ ಚಿತ್ರ 
ದೇಶ

ಒಂದು ಸಿಹಿ ಮುತ್ತಿಗಾಗಿ ಪ್ರಾಣದ ಗೆಳೆತಿಯನ್ನೇ ಕೊಂದ ಗೆಳೆಯ, ದೇಹವನ್ನು ಏನು ಮಾಡಿದ ಗೊತ್ತ?

ಕ್ಲಾಸ್ ಮುಗಿದ ಬಳಿಕ ನಿರ್ಜನ ಪ್ರದೇಶಕ್ಕೆ ತೆರಳಿದ್ದ ಗೆಳೆಯನೊಬ್ಬ ಗೆಳತಿ ಕಿಸ್ ಮಾಡಲಿಲ್ಲ ಎಂಬ ಕಾರಣಕ್ಕೆ ಆಕೆಯನ್ನು ಕೊಂದಿರುವ ದಾರುಣ ಘಟನೆ ನಡೆದಿದೆ.

ಭೋಪಾಲ್: ಕ್ಲಾಸ್ ಮುಗಿದ ಬಳಿಕ ನಿರ್ಜನ ಪ್ರದೇಶಕ್ಕೆ ತೆರಳಿದ್ದ ಗೆಳೆಯನೊಬ್ಬ ಗೆಳತಿ ಕಿಸ್ ಮಾಡಲಿಲ್ಲ ಎಂಬ ಕಾರಣಕ್ಕೆ ಆಕೆಯನ್ನು ಕೊಂದಿರುವ ದಾರುಣ ಘಟನೆ ನಡೆದಿದೆ. 

ಮಧ್ಯಪ್ರದೇಶದ ಜಬಲಾಪುರ ಜಿಲ್ಲೆಯ ಬಿಜಾಪುರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 19 ವರ್ಷದ ರಮಣ್ ಸಿಂಗ್ ಎಂಬಾತ 18 ವರ್ಷದ ಗೆಳತಿಯನ್ನು ಕೊಲೆ ಮಾಡಿದ್ದು ಈ ಸಂಬಂಧ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಗೆಳತಿಯನ್ನು ಕಾಡಿಗೆ ಕರೆದುಕೊಂಡು ಹೋಗಿದ್ದ ರಮಣ್ ಸಿಂಗ್ ಆಕೆಗೆ ಮುತ್ತು ಕೊಡಲು ಮುಂದಾಗಿದ್ದಾನೆ. ಆಗ ಗೆಳತಿ ಇದಕ್ಕೆ ನಿರಾಕರಿಸಿದ್ದು ಆತನನ್ನು ದೂರು ತಳ್ಳಿದ್ದಾಳೆ. ಇದರಿಂದ ಕೋಪಗೊಂಡ ರಮಣ್ ಸಿಂಗ್ ಆಕೆಯನ್ನು ಜೋರಾಗಿ ದೂಡಿದ್ದಾನೆ. ಪರಿಣಾಮ ಆಕೆಯ ತಲೆ ಬಂಡೆಗೆ ತಗುಲಿದೆ. 

ಕೂಡಲೇ ಆಕೆ ಪ್ರಜ್ಞೆ ತಪ್ಪಿದ್ದರಿಂದ ಗಾಬರಿಗೊಂಡ ರಮಣ್ ಮುಂದೇನು ಮಾಡಬೇಕು ಎಂದು ತೋಚದೆ ಆಕೆಯ ದೇಹವನ್ನು ಎಲೆಗಳಿಂದ ಮುಚ್ಚಿ ಮನೆಗೆ ಹೋಗಿದ್ದಾನೆ. ನಿರ್ಜನ ಪ್ರದೇಶದಲ್ಲಿ ಯುವತಿಯ ಮೃತದೇಹ ಪತ್ತೆಯಾಗಿತ್ತು. ತನಿಖೆಗೆ ಕೈಗೊಂಡ ಪೊಲೀಸರಿಗೆ ಇದೀಗ ಆರೋಪಿ ರಮಣ್ ಸಿಂಗ್ ನಡೆದ ಘಟನೆಯನ್ನು ವಿವರಿಸಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT