ಪ್ರಧಾನಿ ಮೋದಿ 
ದೇಶ

ಓಣಂ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ, ವೆಂಕಯ್ಯ ನಾಯ್ಡು

ಓಣಂ ಹಬ್ಬ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಬುಧವಾರ ಶುಭಶಯ ಕೋರಿದ್ದಾರೆ.

ನವದೆಹಲಿ: ಓಣಂ ಹಬ್ಬ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಬುಧವಾರ ಶುಭಶಯ ಕೋರಿದ್ದಾರೆ.

ಓಣಂನ ಶುಭ ಸಂದರ್ಭದಲ್ಲಿ ದೇಶದ ಜನರಿಗೆ ಶುಭಾಶಯಗಳು. ಈ ಹಬ್ಬವು ನಮ್ಮ ಸಮಾಜದಲ್ಲಿ ಸಂತೋಷ, ಆರೋಗ್ಯ ಮತ್ತು ಸಮೃದ್ಧಿಯ ಮನೋಭಾವವನ್ನು ಮತ್ತಷ್ಟು ಹೆಚ್ಚಿಸಲಿ ಎಂದು ಮೋದಿ ತಮ್ಮ ಶುಭ ಹಾರೈಸಿದ್ದಾರೆ.

ಓಣಂ ಹಬ್ಬ ಹಿನ್ನಲೆಯಲ್ಲಿ ದೇಶದ ಜನತೆಗೆ ನನ್ನ ಹೃತ್ಪೂರ್ವಕ ಶುಭಾಶಗಳು. ಶಾಂತಿ ಮತ್ತು ಸಮೃದ್ಧಿಯ ಪ್ರತೀಕವಾಗಿದ್ದ ಕೇರಳ ರಾಜ್ಯದ ಪ್ರಸಿದ್ಧ ಪೌರಾಣಿಕ ರಾಜ ಮಹಾಬಲಿಯವರ ಸ್ಮರಣೆಗಾಗಿ ಓಣಂ ಹಬ್ಬವನ್ನು ಆಚರಣೆ ಮಾಡಲಾಗುತ್ತದೆ ಎಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಹೇಳಿದ್ದಾರೆ. 

ಇದರಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಮಲಯಾಳಂ ಸಮುದಾಯದವರಿಗೆ ಓಣಂ ಹಬ್ಬದ ಶುಭಾಶಯ ಕೋರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT