ಗ್ರಾಮಸ್ಥರು ಶಿಕ್ಷಕನಿಗೆ ಹೊಡೆಯುತ್ತಿರುವುದು 
ದೇಶ

ಶಾಲಾ ಶೌಚಾಲಯದೊಳಗೆ ರಾಸಲೀಲೆ: ಶಿಕ್ಷಕನಿಗೆ ಗ್ರಾಮಸ್ಥರಿಂದ ಥಳಿತ

ಶಾಲೆಯ ಶೌಚಾಲಯದಲ್ಲಿ ಮಹಿಳೆಯೊಂದಿಗೆ ರಾಸಲೀಲೆಯಲ್ಲಿ ತೊಡಗಿದ್ದ  ಶಿಕ್ಷಕನನ್ನು  ಗ್ರಾಮಸ್ಥರೇ  ಹಿಡಿದು ಥಳಿಸಿರುವ ಘಟನೆ ತಮಿಳುನಾಡಿನ ನಾಮಕ್ಕಲ್ ಜಿಲ್ಲೆ  ಪುದುಚತ್ರಂ ಬಳಿಯ  ಎಸ್.ಉದುಂಬಮ್ ಎಂಬ ಗ್ರಾಮದಲ್ಲಿ ನಡೆದಿದೆ. 

ಚೆನ್ನೈ: ಶಾಲೆಯ ಶೌಚಾಲಯದಲ್ಲಿ ಮಹಿಳೆಯೊಂದಿಗೆ ರಾಸಲೀಲೆಯಲ್ಲಿ ತೊಡಗಿದ್ದ  ಶಿಕ್ಷಕನನ್ನು  ಗ್ರಾಮಸ್ಥರೇ  ಹಿಡಿದು ಥಳಿಸಿರುವ ಘಟನೆ ತಮಿಳುನಾಡಿನ ನಾಮಕ್ಕಲ್ ಜಿಲ್ಲೆ  ಪುದುಚತ್ರಂ ಬಳಿಯ  ಎಸ್.ಉದುಂಬಮ್ ಎಂಬ ಗ್ರಾಮದಲ್ಲಿ ನಡೆದಿದೆ.


ಶಾಲೆಯ  ಪಕ್ಕದಲ್ಲಿರುವ ಅಂಗನವಾಡಿಯಲ್ಲಿ  ಕೆಲಸ ಮಾಡುತ್ತಿದ್ದ ಮಹಿಳೆಯ  ಜತೆ   ಶಿಕ್ಷಕ ಸರವಣನ್  ಎಂಬುವರರು   ಅಕ್ರಮ ಸಂಬಂಧ ಇರಿಸಿಕೊಂಡಿದ್ದು,   ಆತ ಕಳೆದ ಕೆಲವು ತಿಂಗಳುಗಳಿಂದ ಶಾಲೆಯ ಶೌಚಾಲಯದಲ್ಲಿ  ಆಕೆಯೊಂದಿಗೆ ರಾಸಲೀಲೆಯಲ್ಲಿ ತೊಡಗುತ್ತಿದ್ದ.  ಇದನ್ನು ಗಮನಿಸಿದ ವಿದ್ಯಾರ್ಥಿಗಳು  ವಿಷಯವನ್ನು ಪೋಷಕರಿಗೆ ತಿಳಿಸಿದ್ದರು.


ಮಂಗಳವಾರ ಬೆಳಿಗ್ಗೆ ದೊಡ್ಡ ಸಂಖ್ಯೆಯಲ್ಲಿ ವಿದ್ಯಾರ್ಥಿಗಳ ಪೋಷಕರು ಶಾಲೆಯ ಬಳಿ ಜಮಾಯಿಸಿ,  ಶಿಕ್ಷಕ  ಸರವಣನ್ ನನ್ನು ಹಿಡಿದು ಮಹಿಳೆಯೊಂದಿಗಿನ ಅಕ್ರಮ ಸಂಬಂಧ ವಿಷಯ ಪ್ರಸ್ತಾಪಿಸಿ, ಆಕ್ರೋಶ ವ್ಯಕ್ತಪಡಿಸಿದರು. ಕೆಲವು ಮಹಿಳೆಯರು  ಶಿಕ್ಷಕನಿಗೆ ಚಪ್ಪಲಿ ಹಾಗೂ ಪೊರಕೆಯಿಂದ ಥಳಿಸಿ ನಂತರ ಪೊಲೀಸರಿಗೆ ಒಪ್ಪಿಸಿದರು.   


ಈ ವಿಷಯ ಕುರಿತು ಶಾಲೆಯ ಮುಖ್ಯೋಪಾಧ್ಯಾಯ ಜಯರಾಜ್  ಮಾತನಾಡಿ,  "ಎರಡು ತಿಂಗಳ ಹಿಂದೆ   ಇದೇ ರೀತಿ  ಸರವಣನ್ ಅವರು ಮಹಿಳೆಯೊಂದಿಗೆ  ಶಾಲೆಯ ಶೌಚಾಲಯಲ್ಲಿರುವ ಮಾಹಿತಿ ತಿಳಿಯಿತು. ಕೂಡಲೇ     ಅಲ್ಲಿಗೆ ತೆರಳಿದಾಗ  ಶೌಚಾಲಯದ  ಬೀಗ ಹಾಕಲಾಗಿತ್ತು.  ಶೌಚಾಲಯ  ಬೀಗ ತೆಗೆದು ಒಳಗೆ ನೋಡಿದಾಗ  ಮಹಿಳೆ   ಒಳಗೆ ಇದ್ದಳು. ನಂತರ  ಸರವಣನ್ ಅವರಿಗೆ ಎಚ್ಚರಿಕೆ ನೀಡಿದ್ದೆ  ಎಂದು ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT