ಗ್ರಾಮಸ್ಥರು ಶಿಕ್ಷಕನಿಗೆ ಹೊಡೆಯುತ್ತಿರುವುದು 
ದೇಶ

ಶಾಲಾ ಶೌಚಾಲಯದೊಳಗೆ ರಾಸಲೀಲೆ: ಶಿಕ್ಷಕನಿಗೆ ಗ್ರಾಮಸ್ಥರಿಂದ ಥಳಿತ

ಶಾಲೆಯ ಶೌಚಾಲಯದಲ್ಲಿ ಮಹಿಳೆಯೊಂದಿಗೆ ರಾಸಲೀಲೆಯಲ್ಲಿ ತೊಡಗಿದ್ದ  ಶಿಕ್ಷಕನನ್ನು  ಗ್ರಾಮಸ್ಥರೇ  ಹಿಡಿದು ಥಳಿಸಿರುವ ಘಟನೆ ತಮಿಳುನಾಡಿನ ನಾಮಕ್ಕಲ್ ಜಿಲ್ಲೆ  ಪುದುಚತ್ರಂ ಬಳಿಯ  ಎಸ್.ಉದುಂಬಮ್ ಎಂಬ ಗ್ರಾಮದಲ್ಲಿ ನಡೆದಿದೆ. 

ಚೆನ್ನೈ: ಶಾಲೆಯ ಶೌಚಾಲಯದಲ್ಲಿ ಮಹಿಳೆಯೊಂದಿಗೆ ರಾಸಲೀಲೆಯಲ್ಲಿ ತೊಡಗಿದ್ದ  ಶಿಕ್ಷಕನನ್ನು  ಗ್ರಾಮಸ್ಥರೇ  ಹಿಡಿದು ಥಳಿಸಿರುವ ಘಟನೆ ತಮಿಳುನಾಡಿನ ನಾಮಕ್ಕಲ್ ಜಿಲ್ಲೆ  ಪುದುಚತ್ರಂ ಬಳಿಯ  ಎಸ್.ಉದುಂಬಮ್ ಎಂಬ ಗ್ರಾಮದಲ್ಲಿ ನಡೆದಿದೆ.


ಶಾಲೆಯ  ಪಕ್ಕದಲ್ಲಿರುವ ಅಂಗನವಾಡಿಯಲ್ಲಿ  ಕೆಲಸ ಮಾಡುತ್ತಿದ್ದ ಮಹಿಳೆಯ  ಜತೆ   ಶಿಕ್ಷಕ ಸರವಣನ್  ಎಂಬುವರರು   ಅಕ್ರಮ ಸಂಬಂಧ ಇರಿಸಿಕೊಂಡಿದ್ದು,   ಆತ ಕಳೆದ ಕೆಲವು ತಿಂಗಳುಗಳಿಂದ ಶಾಲೆಯ ಶೌಚಾಲಯದಲ್ಲಿ  ಆಕೆಯೊಂದಿಗೆ ರಾಸಲೀಲೆಯಲ್ಲಿ ತೊಡಗುತ್ತಿದ್ದ.  ಇದನ್ನು ಗಮನಿಸಿದ ವಿದ್ಯಾರ್ಥಿಗಳು  ವಿಷಯವನ್ನು ಪೋಷಕರಿಗೆ ತಿಳಿಸಿದ್ದರು.


ಮಂಗಳವಾರ ಬೆಳಿಗ್ಗೆ ದೊಡ್ಡ ಸಂಖ್ಯೆಯಲ್ಲಿ ವಿದ್ಯಾರ್ಥಿಗಳ ಪೋಷಕರು ಶಾಲೆಯ ಬಳಿ ಜಮಾಯಿಸಿ,  ಶಿಕ್ಷಕ  ಸರವಣನ್ ನನ್ನು ಹಿಡಿದು ಮಹಿಳೆಯೊಂದಿಗಿನ ಅಕ್ರಮ ಸಂಬಂಧ ವಿಷಯ ಪ್ರಸ್ತಾಪಿಸಿ, ಆಕ್ರೋಶ ವ್ಯಕ್ತಪಡಿಸಿದರು. ಕೆಲವು ಮಹಿಳೆಯರು  ಶಿಕ್ಷಕನಿಗೆ ಚಪ್ಪಲಿ ಹಾಗೂ ಪೊರಕೆಯಿಂದ ಥಳಿಸಿ ನಂತರ ಪೊಲೀಸರಿಗೆ ಒಪ್ಪಿಸಿದರು.   


ಈ ವಿಷಯ ಕುರಿತು ಶಾಲೆಯ ಮುಖ್ಯೋಪಾಧ್ಯಾಯ ಜಯರಾಜ್  ಮಾತನಾಡಿ,  "ಎರಡು ತಿಂಗಳ ಹಿಂದೆ   ಇದೇ ರೀತಿ  ಸರವಣನ್ ಅವರು ಮಹಿಳೆಯೊಂದಿಗೆ  ಶಾಲೆಯ ಶೌಚಾಲಯಲ್ಲಿರುವ ಮಾಹಿತಿ ತಿಳಿಯಿತು. ಕೂಡಲೇ     ಅಲ್ಲಿಗೆ ತೆರಳಿದಾಗ  ಶೌಚಾಲಯದ  ಬೀಗ ಹಾಕಲಾಗಿತ್ತು.  ಶೌಚಾಲಯ  ಬೀಗ ತೆಗೆದು ಒಳಗೆ ನೋಡಿದಾಗ  ಮಹಿಳೆ   ಒಳಗೆ ಇದ್ದಳು. ನಂತರ  ಸರವಣನ್ ಅವರಿಗೆ ಎಚ್ಚರಿಕೆ ನೀಡಿದ್ದೆ  ಎಂದು ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT