ರಾಹುಲ್ ಗಾಂಧಿ 
ದೇಶ

ನಮಗೆ 'ಮೂರ್ಖ' ಸಿದ್ಧಾಂತಗಳ ಅಗತ್ಯವಿಲ್ಲ: ನಿರ್ಮಲಾ ಸೀತಾರಾಮನ್ ಗೆ ರಾಹುಲ್ ತಿರುಗೇಟು

ದೇಶದಲ್ಲಿ ಆರ್ಥಿಕತೆ ಕುಸಿತ ಕಂಡುಬಂದಿರುವ ಈ ಸಂದರ್ಭದಲ್ಲಿ ಪ್ರಚಾರ, ಇನ್ನೊಬ್ಬರನ್ನು ಪ್ರಚೋದಿಸುವಂತಹ ಸುದ್ದಿಗಳು, ಮೂರ್ಖ ಸಿದ್ಧಾಂತಗಳು ನಮಗೆ ಬೇಕಾಗಿಲ್ಲ, ಆರ್ಥಿಕತೆಯನ್ನು ಸರಿಪಡಿಸುವ ವಾಸ್ತವ ಯೋಜನೆಯ ಅಗತ್ಯವಿದೆ ಎಂದು ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ದೇಶದಲ್ಲಿ ಆರ್ಥಿಕತೆ ಕುಸಿತ ಕಂಡುಬಂದಿರುವ ಈ ಸಂದರ್ಭದಲ್ಲಿ ಪ್ರಚಾರ, ಇನ್ನೊಬ್ಬರನ್ನು ಪ್ರಚೋದಿಸುವಂತಹ ಸುದ್ದಿಗಳು, ಮೂರ್ಖ ಸಿದ್ಧಾಂತಗಳು ನಮಗೆ ಬೇಕಾಗಿಲ್ಲ, ಆರ್ಥಿಕತೆಯನ್ನು ಸರಿಪಡಿಸುವ ವಾಸ್ತವ ಯೋಜನೆಯ ಅಗತ್ಯವಿದೆ ಎಂದು ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.


ಆಟೊಮೊಬೈಲ್ ವಲಯದಲ್ಲಿ ಕುಸಿತ ಕಂಡುಬಂದಿರುವುದಕ್ಕೆ ಕಾರಣವೇನು ಎಂದು ವಿಶ್ಲೇಷಿಸುತ್ತಾ ಮೊನ್ನೆ ಚೆನ್ನೈಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಭಾರತಕ್ಕೆ ಇಲ್ಲಸಲ್ಲದ ಪ್ರಚಾರಗಳು, ಈಗಿನ ಕಾಲದ ಜನರ ಬಗ್ಗೆ ಪ್ರಚೋದನಾಕಾರಿ ಸುದ್ದಿಗಳು, ಮೂರ್ಖ ಸಿದ್ದಾಂತಗಳು ಬೇಕಿಲ್ಲ, ತಳಮಟ್ಟದ ವಾಸ್ತವ ಯೋಜನೆಗಳನ್ನು ರೂಪಿಸಿ ಆರ್ಥಿಕತೆಯನ್ನು ಸರಿಪಡಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ. 


ಕೊನೆಗೂ ಸರ್ಕಾರ ದೇಶದಲ್ಲಿ ಸಮಸ್ಯೆ ಇದೆ ಎಂದು ಒಪ್ಪಿಕೊಂಡಿರುವುದು ಸಮಾಧಾನಕರ ಸಂಗತಿ. ನಮ್ಮ ದೇಶದಲ್ಲಿ ಸಮಸ್ಯೆ ಇದೆ ಎಂದು ಒಪ್ಪಿಕೊಳ್ಳುವುದು ಆರಂಭದ ಮುನ್ಸೂಚನೆಯಾಗಿದೆ ಎಂದು ಹೇಳಿದ್ದಾರೆ. ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರ ಸಂದರ್ಶನವನ್ನು ಟ್ಯಾಗ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT