ಐಶ್ವರ್ಯಾ 
ದೇಶ

ಊಟಕ್ಕೂ ಬಿಡದೆ ಪುತ್ರಿ ಐಶ್ವರ್ಯ ಸತತ ವಿಚಾರಣೆ; ಅಸ್ವಸ್ಥಗೊಂಡ ಅಪ್ಪ ಡಿಕೆ ಶಿವಕುಮಾರ್

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್​ ಅವರ ಮಗಳು ಐಶ್ವರ್ಯಾ ಅವರನ್ನು ಗುರುವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ...

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್​ ಅವರ ಮಗಳು ಐಶ್ವರ್ಯಾ ಅವರನ್ನು ಗುರುವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಸತತ 7 ಗಂಟೆಗಳ ಕಾಲ ವಿಚಾರಣೆ ನಡೆಸಿದರು.

23 ವರ್ಷದ ಐಶ್ವರ್ಯ ವಿವಿಧ ಕಂಪನಿಗಳಲ್ಲಿ ಹೂಡಿಕೆ ಮಾಡಿರುವುದು ಹಾಗೂ ಅವರು ಕೋಟ್ಯಾಂತರ ರೂ. ವಹಿವಾಟು ನಡೆಸಿರುವ ಬಗ್ಗೆ ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯ ಅವರಿಗೆ ಮೂರು ದಿನಗಳ ಹಿಂದೆ ಸಮನ್ಸ್​ ಜಾರಿ ಮಾಡಿತ್ತು.

ಇಂದು ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದ ಐಶ್ವರ್ಯಾ ಅವರನ್ನು ಇಡಿ ಅಧಿಕಾರಿಗಳು ಮಧ್ಯಾಹ್ನ ಊಟಕ್ಕೂ ಬಿಡದೆ ನಿರಂತರ 7 ಗಂಟೆಗಳ ಕಾಲ ವಿಚಾರಣೆ ಒಳಪಡಿಸಿದ್ದು ಡಿಕೆ ಶಿವಕುಮಾರ್ ಹಾಗೂ ಸಹೋದರ ಡಿಕೆ ಸುರೇಶ್ ಅವರನ್ನು ಆತಂಕಗೊಳ್ಳುವಂತೆ ಮಾಡಿದೆ.

ಒಂದು ಕಡೆ ಪುತ್ರಿ ಐಶ್ವರ್ಯಾರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೊಳ ಪಡಿಸಿದ್ದರೆ, ಮತ್ತೊಂದಡೆ ಸತತ 9ನೇ ದಿನವೂ ಡಿ ಕೆ ಶಿವಕುಮಾರ್ ಅವರಿಗೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. 

ಇಡಿ ವಶಕ್ಕೆ ಪಡೆದಾಗಿನಿಂದಲೂ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಡಿಕೆ ಶಿವಕುಮಾರ್ ಅವರು, ಬಂಧನಕ್ಕೂ ಮುನ್ನ ಆರ್​ಎಂಎಲ್​ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಬಿಪಿ ಹಾಗೂ ಹೈ ಶುಗರ್​ನಿಂದ ಬಳಲುತ್ತಿರುವ ಅವರಿಗೆ ಪ್ರತಿನಿತ್ಯ ವೈದ್ಯಕೀಯ ತಪಾಸಣೆ ನಡೆಸಬೇಕು ಎಂದು ವಿಶೇಷ ನ್ಯಾಯಾಲಯ ಕೂಡ ಸೂಚನೆ ನೀಡಿತ್ತು.

ಇಂದು ಮಗಳು ಇಡಿ ಕಚೇರಿಗೆ ಹಾಜರಾಗಿರುವ ಸುದ್ದಿ ಕೇಳುತ್ತಿದ್ದಂತೆ ಅವರಿಗೆ ಹೈ ಬಿಪಿಯಾಗಿದ್ದು , ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಅವರ ಕುಟುಂಬ ವೈದ್ಯರು ರಂಗನಾಥ್​ ಚಿಕಿತ್ಸೆ ನೀಡಿದ್ದಾರೆ. ಡಿಕೆ ಶಿವಕುಮಾರ್​ ಆರೋಗ್ಯ ಮೊದಲೇ ಹದಗೆಟ್ಟಿದ್ದು, ಈ ಸುದ್ದಿ ತಿಳಿದು ಮಾನಸಿಕವಾಗಿ ಕೂಡ ಅವರು ಬಳಲಿದ್ದಾರೆ. ಈ ಹಿನ್ನೆಲೆ ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT