ರವೀಶ್ ಕುಮಾರ್ 
ದೇಶ

ಕುಲಭೂಷಣ್ ಜಾಧವ್ ಗೆ ಮತ್ತೊಮ್ಮೆ ದೂತಾವಾಸ ಸಂಪರ್ಕ ಕಲ್ಪಿಸಲು ಯತ್ನ: ವಿದೇಶಾಂಗ ಸಚಿವಾಲಯ

ಗೂಡಾಚಾರಿಕೆ ಮತ್ತು ಭಯೋತ್ಪಾದನೆ ಆರೋಪದ ಮೇಲೆ ಪಾಕಿಸ್ತಾನ ಸೇನೆಯ ವಶದಲ್ಲಿರುವ ಭಾರತೀಯ ನೌಕಾ ಪಡೆಯ ನಿವೃತ್ ಅಧಿಕಾರಿ ಮತ್ತು ಉದ್ಯಮಿ ಕುಲಭೂಷನ್ ಜಾಧವ್ ಅವರಿಗೆ ಎರಡನೇ ಬಾರಿಗೆ ದೂತಾವಾಸದ ಸಂಪರ್ಕ ಕಲ್ಪಿಸಲು ಪಾಕ್ ನಿರಾಕರಿಸಿದ ಬೆನ್ನಲ್ಲೇ, ತಾವು ಮರು ಪ್ರಯತ್ನ ನಡೆಸುವುದಾಗಿ ಭಾರತ ಹೇಳಿದೆ. 

ನವದೆಹಲಿ/ ಇಸ್ಲಮಾಬಾದ್ :ಗೂಡಾಚಾರಿಕೆ ಮತ್ತು ಭಯೋತ್ಪಾದನೆ ಆರೋಪದ ಮೇಲೆ ಪಾಕಿಸ್ತಾನ ಸೇನೆಯ ವಶದಲ್ಲಿರುವ ಭಾರತೀಯ ನೌಕಾ ಪಡೆಯ ನಿವೃತ್ ಅಧಿಕಾರಿ ಮತ್ತು ಉದ್ಯಮಿ ಕುಲಭೂಷನ್ ಜಾಧವ್ ಅವರಿಗೆ ಎರಡನೇ ಬಾರಿಗೆ ದೂತಾವಾಸದ ಸಂಪರ್ಕ ಕಲ್ಪಿಸಲು ಪಾಕ್ ನಿರಾಕರಿಸಿದ ಬೆನ್ನಲ್ಲೇ, ತಾವು ಮರು ಪ್ರಯತ್ನ ನಡೆಸುವುದಾಗಿ ಭಾರತ ಹೇಳಿದೆ. 

ಈ ಕುರಿತು ಹೇಳಿಕೆ ನೀಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್, ಪಾಕ್ ವಿದೇಶಾಂಗ ಸಚಿವಾಲಯದ ಹೇಳಿಕೆಯ ಕುರಿತು ಮಾಹಿತಿ ಇದೆ. ಆದರೆ, ತಾವು ಅಂತಾರಾಷ್ಟ್ರೀಯ ನ್ಯಾಯಾಲಯದ ತೀರ್ಪನ್ನು ಪರಿಪೂರ್ಣವಾಗಿ ಪಾಲಿಸಲು ಪ್ರಯತ್ನಿಸುತ್ತೇವೆ. ಈ ಹಿಂದೆ ತೀರ್ಪು ಭಾರತದ ಪರವಾಗಿತ್ತು ಎಂಬುದನ್ನು ಮರೆಯಬಾರದು. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜತಾಂತ್ರಿಕ ಮಾರ್ಗದ ಮೂಲಕ ಪಾಕಿಸ್ತಾನದೊಂದಿಗೆ ಸಂಪರ್ಕದಲ್ಲಿರಲಿದ್ದೇವೆ ಎಂದರು.

ಕಾಶ್ಮೀರವನ್ನು ರಾಜಕೀಯಗೊಳಿಸುವ ಪಾಕಿಸ್ತಾನದ ಪ್ರಯತ್ನವನ್ನು ವಿಶ್ವಸಂಸ್ಥೆ ಮಾನವ ಹಕ್ಕುಗಳ ಸಮಿತಿಯಲ್ಲಿ ತಿರಸ್ಕರಿಸಲಾಗಿದೆ. ಸುಳ್ಳನ್ನು ನಾಲ್ಕೈದು ಸಲ ಹೇಳಿದರೆ ಸತ್ಯವಾಗುವುದಿಲ್ಲ ಎಂಬುದನ್ನು ಪಾಕಿಸ್ತಾನ ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದು ರವೀಶ್ ಕುಮಾರ್ ಹೇಳಿದರು. 

ಇದಕ್ಕೂ ಮುನ್ನ ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ವಕ್ತಾರ ಮೊಹಮ್ಮದ್ ಫೈಸಲ್, ಕುಲಭೂಷಣ್ ಜಾಧವ್ ಅವರಿಗೆ ಎರಡನೇ ಬಾರಿಗೆ ದೂತಾವಾಸದ ಸಂಪರ್ಕ ಕಲ್ಪಿಸುವುದಿಲ್ಲ ಎಂಬ ಹೇಳಿಕೆ ನೀಡಿದ್ದರು. 

ಹೇಗ್ ನ ಅಂತಾರಾಷ್ಟ್ರೀಯ ನ್ಯಾಯಾಲಯದ ತೀರ್ಪಿನ ಅನುಸಾರ, ಸೆಪ್ಟೆಂಬರ್ 2ರಂದು ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ಮೊದಲ ದೂತಾವಾಸದ ಸಂಪರ್ಕ ಕಲ್ಪಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

SCROLL FOR NEXT