ಗಣಪತಿ ವಿಗ್ರಹ 
ದೇಶ

ಮಹಾರಾಷ್ಟ್ರದ ವಿವಿಧೆಡೆ ಗಣಪತಿ ವಿಗ್ರಹ ವಿಸರ್ಜನೆ ವೇಳೆ 18 ಮಂದಿ ಜಲಸಮಾಧಿ

ಮುಂಬೈ, ಪುಣೆ, ಸಾಗ್ಲಿ ಸೇರಿದಂತೆ ವಿವಿಧೆಡೆ ಗಣಪತಿ ವಿಗ್ರಹ ವಿಸರ್ಜನೆ ವೇಳೆಯಲ್ಲಿ ಸುಮಾರು 18 ಮಂದಿ ಜಲ ಸಮಾಧಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರ: ಮುಂಬೈ, ಪುಣೆ, ಸಾಗ್ಲಿ ಸೇರಿದಂತೆ ವಿವಿಧೆಡೆ ಗಣಪತಿ ವಿಗ್ರಹ ವಿಸರ್ಜನೆ ವೇಳೆಯಲ್ಲಿ ಸುಮಾರು 18 ಮಂದಿ ಜಲ ಸಮಾಧಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮರಾವತಿ, ನಾಸಿಕ್, ಥಾಣೆ, ಸಿಂಧುದುರ್ಗ, ರತ್ನಗಿರಿ, ಧುಳೆ, ಬಾಂದ್ರಾ, ನಾಂದೆಡ್, ಅಹ್ಮದ್ ನಗರ, ಅಂಕೋಲಾ, ಸಾತಾರಾ ಸೇರಿದಂತೆ  11 ಜಿಲ್ಲೆಗಳಲ್ಲಿ ಗಣಪತಿ ವಿಗ್ರಹ  ವಿಸರ್ಜನೆ ವೇಳೆಯಲ್ಲಿ ದುರಂತವಾಗಿರುವ ಬಗ್ಗೆ ವರದಿಯಾಗಿದ್ದು, 18 ಮಂದಿ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.

ಅಮರಾವತಿಯಲ್ಲಿ ನಾಲ್ವರು, ರತ್ನಗಿರಿಯಲ್ಲಿ ಮೂವರು, ನಾಸಿಕ್ , ಸಿಂಧ್ ದುರ್ಗ ಹಾಗೂ ಸತಾರಾದಲ್ಲಿ ತಲಾ ಇಬ್ಬರು, ಥಾಣೆಯಲ್ಲಿ ಒಬ್ಬರು , ಧುಳೆ, ಅಂಕೋಲಾ ಮತ್ತು ಬಾಂದ್ರಾದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

ಥಾಣೆಯಲ್ಲಿ ನಿನ್ನೆ ಸಂಜೆ 7-30ರ ಸುಮಾರಿನಲ್ಲಿ ಕಲ್ಪೇಶ್ ಜಾದವ್ ಎಂಬ 15 ವರ್ಷದ ಬಾಲಕ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.  ಅಮರಾವತಿಯ ವಾಟೋಲ್ ಶುಕಲೇಶ್ವರ ಗ್ರಾಮದ ನದಿಯಲ್ಲಿ ಮುಳುಗಿದ್ದ ನಾಲ್ವರ ಶವಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT