ಅಮೃತಸರದ ಸ್ವರ್ಣ ಮಂದಿರ 
ದೇಶ

312 ಸಿಖ್ ವಿದೇಶಿ ಪ್ರಜೆಗಳ ಹೆಸರು ಕಪ್ಪುಪಟ್ಟಿಯಿಂದ ಹೊರಗೆ; ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ 

ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಸಿಖ್ ವಿದೇಶಿಯರ ಕಪ್ಪುಪಟ್ಟಿಯಿಂದ 312 ಮಂದಿಯ ಹೆಸರನ್ನು ಕೇಂದ್ರ ಸರ್ಕಾರ ಕೈಬಿಟ್ಟಿದೆ.  

ನವದೆಹಲಿ: ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಸಿಖ್ ವಿದೇಶಿಯರ ಕಪ್ಪುಪಟ್ಟಿಯಿಂದ 312 ಮಂದಿಯ ಹೆಸರನ್ನು ಕೇಂದ್ರ ಸರ್ಕಾರ ಕೈಬಿಟ್ಟಿದೆ. 


ಈ ಮೂಲಕ ಕಪ್ಪು ಪಟ್ಟಿಯಿಂದ ಹೊರಬಂದಿರುವ 312 ಮಂದಿ ವಿದೇಶಿಯರು ಇನ್ನು ಮುಂದೆ ಭಾರತೀಯ ವೀಸಾ ಪಡೆಯಲು ಮತ್ತು ಸಾಗರೋತ್ತರ ಭಾರತೀಯ ಕಾರ್ಡನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಗೃಹ ಸಚಿವಾಲಯ ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲಾ ವಿದೇಶಿ ಧರ್ಮ ಪ್ರಚಾರ ಕೇಂದ್ರಗಳಿಗೆ ಈ ಕುರಿತು ಮಾಹಿತಿ ನೀಡಲಾಗಿದೆ ಎಂದು ಸಚಿವಾಲಯ ಹೇಳಿದೆ.


ಇವರಿಂದ ಭಾರತಕ್ಕೆ ಬೆದರಿಕೆಯಿರುವ ಹಿನ್ನಲೆಯಲ್ಲಿ ಕಪ್ಪುಪಟ್ಟಿಯಿಂದ ವಿದೇಶಿ ಸಿಖ್ಖರನ್ನು ಹೊರಗಿಡಲು ಸರ್ಕಾರ ತೀರ್ಮಾನಿಸಿದೆ. ಇದರಿಂದ ಅವರಿಗೆ ಭಾರತಕ್ಕೆ ಬಂದು ತಮ್ಮ ಕುಟುಂಬದವರನ್ನು ಭೇಟಿ ಮಾಡಲು ಸಹಾಯವಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


1980ರ ದಶಕದಲ್ಲಿ ಭಾರತದಲ್ಲಿ ಸಿಖ್ಖರಿಗೆ ಪ್ರತ್ಯೇಕ ನೆಲ ಬೇಕೆಂದು ಉಗ್ರವಾದ ಚಳವಳಿ ತೀವ್ರವಾಗಿದ್ದ ಸಮಯದಲ್ಲಿ ಸಿಖ್ ಸಮುದಾಯಕ್ಕೆ ಸೇರಿದ ಹಲವು ಭಾರತೀಯರು ಮತ್ತು ವಿದೇಶಿಯರು ಭಾರತ ವಿರೋಧಿ ಪ್ರಚಾರ ನಡೆಸುತ್ತಿದ್ದರು. ಕೆಲವರು ಭಾರತವನ್ನು ತೊರೆದುಹೋಗಿ ವಿದೇಶಗಳಲ್ಲಿ ಹೋಗಿ ನೆಲೆಸಿ ಅಲ್ಲಿನ ಪ್ರಜೆಗಳಾಗಿಬಿಟ್ಟರು. ಅಂತವರನ್ನು 2016ರವರೆಗೆ ಕಪ್ಪುಪಟ್ಟಿಯಲ್ಲಿ ಇರಿಸಲಾಗಿತ್ತು. ಅವರಿಗೆ ಭಾರತಕ್ಕೆ ಭೇಟಿ ನೀಡಲು ವೀಸಾ ಸೌಲಭ್ಯ ಕೂಡ ಸಿಗುತ್ತಿರಲಿಲ್ಲ.


ಕಪ್ಪುಪಟ್ಟಿಯಲ್ಲಿ ಸೇರಿಸಿದ್ದರಿಂದ ಅದರಲ್ಲಿ ಸೇರಿದ್ದ ಸಿಖ್ಖರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಭಾರತೀಯ ದೂತಾವಾಸ ಸೇವೆ ಲಭ್ಯವಾಗುತ್ತಿರಲಿಲ್ಲ. ಇಂತವರನ್ನು ಇದೀಗ ಕಪ್ಪುಪಟ್ಟಿಯಿಂದ ತೆಗೆದುಹಾಕಿರುವುದರಿಂದ ಇನ್ನು ಮುಂದೆ ಭಾರತೀಯ ವೀಸಾ ಪಡೆದು ಇಲ್ಲಿ ದೀರ್ಘಸಮಯ ನೆಲೆಸಬಹುದು. ಅಲ್ಲದೆ ಸಾಗರೋತ್ತರ ಭಾರತೀಯ ನಾಗರಿಕರ ಗುರುತು ಚೀಟಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ ವೀಸಾ ಮೂಲಕ ಭಾರತದಲ್ಲಿ ಎರಡು ವರ್ಷಗಳವರೆಗೆ ನೆಲೆಸಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT