ಬಾಬರಿ ಮಸೀದಿ 
ದೇಶ

ಬಾಬ್ರಿ ಮಸೀದಿ ದ್ವಂಸ ಪ್ರಕರಣ ವಿಚಾರಣೆ; ವಿಶೇಷ ನ್ಯಾಯಾಧೀಶರ ಅವಧಿ ವಿಸ್ತರಿಸಿದ ಯುಪಿ ಸರ್ಕಾರ

ಬಿಜೆಪಿ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಎಂ ಎಂ ಜೋಷಿ ಹಾಗೂ ಉಮಾ ಭಾರತಿ ಭಾಗಿಯಾಗಿರುವ 1992ರ ಬಾಬ್ರಿ ಮಸೀದಿ ದ್ವಂಸ ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಧೀಶರ ಅವಧಿಯನ್ನು ಸುಪ್ರೀಂಕೋರ್ಟ್

ಲಕ್ನೋ: ಬಿಜೆಪಿ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಎಂ ಎಂ ಜೋಷಿ ಹಾಗೂ ಉಮಾ ಭಾರತಿ ಭಾಗಿಯಾಗಿರುವ 1992ರ ಬಾಬ್ರಿ ಮಸೀದಿ ದ್ವಂಸ ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಧೀಶರ ಅವಧಿಯನ್ನು ಸುಪ್ರೀಂಕೋರ್ಟ್ ಸೂಚನೆಯಂತೆ ವಿಸ್ತರಿಸಿರುವುದಾಗಿ ಉತ್ತರ ಪ್ರದೇಶ ಸರ್ಕಾರ ಶುಕ್ರವಾರ ಸರ್ವೋಚ್ಛ ನ್ಯಾಯಾಲಯಕ್ಕೆ ತಿಳಿಸಿದೆ.

ನ್ಯಾಯಮೂರ್ತಿ ಆರ್.ಎಫ್. ನಾರಿಮನ್ ಹಾಗೂ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರನ್ನೊಳಗೊಂಡ ನ್ಯಾಯಪೀಠದ ಮುಂದೆ ಉತ್ತರ ಪ್ರದೇಶ ಸರ್ಕಾರದ ಮುಖ್ಯಕಾರ್ಯದರ್ಶಿ ಈ ಸಂಬಂಧ ಪ್ರಮಾಣಪತ್ರ ಹಾಗೂ ಸರ್ಕಾರಿ ಆದೇಶದ ಪ್ರತಿಯನ್ನು ಸಲ್ಲಿಸಿದ್ದಾರೆ.

ಉತ್ತರ ಪ್ರದೇಶದ ಪರವಾಗಿ ಹಾಜರಾದ ಹಿರಿಯ ವಕೀಲ ಐಶರ್ಯಾ ಭಟಿ, ದೇಶದ ಸರ್ವೋಚ್ಛ ನಾಯಾಲಯದ ನಿರ್ದೇಶನವನ್ನು ಪರಿಗಣಿಸಿ ಆಯೋಧ್ಯ ಧ್ವಂಸ ಪ್ರಕರಣದ ತೀರ್ಪು ನೀಡುವವರೆಗೆ ವಿಶೇಷ ನ್ಯಾಯಾಧೀಶರ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ತಿಳಿಸಿದರು. ಅಗತ್ಯವಾದ ಕ್ರಮ ಕೈಗೊಂಡಿರುವುದಕ್ಕೆ ನಮಗೆ ತೃಪ್ತಿಯಾಗಿದೆ ಎಂದು ಹೇಳಿದ ನ್ಯಾಯಪೀಠ ವಿಷಯವನ್ನು ಇತ್ಯರ್ಥಪಡಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT