ಬಾಬರಿ ಮಸೀದಿ 
ದೇಶ

ಬಾಬ್ರಿ ಮಸೀದಿ ದ್ವಂಸ ಪ್ರಕರಣ ವಿಚಾರಣೆ; ವಿಶೇಷ ನ್ಯಾಯಾಧೀಶರ ಅವಧಿ ವಿಸ್ತರಿಸಿದ ಯುಪಿ ಸರ್ಕಾರ

ಬಿಜೆಪಿ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಎಂ ಎಂ ಜೋಷಿ ಹಾಗೂ ಉಮಾ ಭಾರತಿ ಭಾಗಿಯಾಗಿರುವ 1992ರ ಬಾಬ್ರಿ ಮಸೀದಿ ದ್ವಂಸ ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಧೀಶರ ಅವಧಿಯನ್ನು ಸುಪ್ರೀಂಕೋರ್ಟ್

ಲಕ್ನೋ: ಬಿಜೆಪಿ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಎಂ ಎಂ ಜೋಷಿ ಹಾಗೂ ಉಮಾ ಭಾರತಿ ಭಾಗಿಯಾಗಿರುವ 1992ರ ಬಾಬ್ರಿ ಮಸೀದಿ ದ್ವಂಸ ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಧೀಶರ ಅವಧಿಯನ್ನು ಸುಪ್ರೀಂಕೋರ್ಟ್ ಸೂಚನೆಯಂತೆ ವಿಸ್ತರಿಸಿರುವುದಾಗಿ ಉತ್ತರ ಪ್ರದೇಶ ಸರ್ಕಾರ ಶುಕ್ರವಾರ ಸರ್ವೋಚ್ಛ ನ್ಯಾಯಾಲಯಕ್ಕೆ ತಿಳಿಸಿದೆ.

ನ್ಯಾಯಮೂರ್ತಿ ಆರ್.ಎಫ್. ನಾರಿಮನ್ ಹಾಗೂ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರನ್ನೊಳಗೊಂಡ ನ್ಯಾಯಪೀಠದ ಮುಂದೆ ಉತ್ತರ ಪ್ರದೇಶ ಸರ್ಕಾರದ ಮುಖ್ಯಕಾರ್ಯದರ್ಶಿ ಈ ಸಂಬಂಧ ಪ್ರಮಾಣಪತ್ರ ಹಾಗೂ ಸರ್ಕಾರಿ ಆದೇಶದ ಪ್ರತಿಯನ್ನು ಸಲ್ಲಿಸಿದ್ದಾರೆ.

ಉತ್ತರ ಪ್ರದೇಶದ ಪರವಾಗಿ ಹಾಜರಾದ ಹಿರಿಯ ವಕೀಲ ಐಶರ್ಯಾ ಭಟಿ, ದೇಶದ ಸರ್ವೋಚ್ಛ ನಾಯಾಲಯದ ನಿರ್ದೇಶನವನ್ನು ಪರಿಗಣಿಸಿ ಆಯೋಧ್ಯ ಧ್ವಂಸ ಪ್ರಕರಣದ ತೀರ್ಪು ನೀಡುವವರೆಗೆ ವಿಶೇಷ ನ್ಯಾಯಾಧೀಶರ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ತಿಳಿಸಿದರು. ಅಗತ್ಯವಾದ ಕ್ರಮ ಕೈಗೊಂಡಿರುವುದಕ್ಕೆ ನಮಗೆ ತೃಪ್ತಿಯಾಗಿದೆ ಎಂದು ಹೇಳಿದ ನ್ಯಾಯಪೀಠ ವಿಷಯವನ್ನು ಇತ್ಯರ್ಥಪಡಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT